ಬ್ರೇಕಿಂಗ್ ನ್ಯೂಸ್
29-07-26 01:53 pm HK News Staffer ಕ್ರೈಂ
ಉಡುಪಿ, ಜು.29: ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಮತ್ತು ದ್ವೇಷ ಪ್ರಚೋದಿಸುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
ದೂರಿನ ಪ್ರಕಾರ, ಜುಲೈ 28ರಂದು ಉಡುಪಿಯ ಜೋಡುಕಟ್ಟೆ ಸಮೀಪ ನಡೆದ ಬಿಜೆಪಿ ಪ್ರತಿಭಟನಾ ಸಭೆಯಲ್ಲಿ ಶಾಸಕ ಯಶ್ಪಾಲ್ ಸುವರ್ಣ ರಾಹುಲ್ ಗಾಂಧಿ ಅವರನ್ನು ಉದ್ದೇಶಿಸಿ ಅವಹೇಳನಕಾರಿ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಭಾಷಣದ ವೇಳೆ ಬಾಬ್ರಿ ಮಸೀದಿ ಧ್ವಂಸ ಪ್ರಕರಣವನ್ನು ಉಲ್ಲೇಖಿಸಿ ವಿವಿಧ ಸಮುದಾಯಗಳ ನಡುವೆ ದ್ವೇಷ ಮತ್ತು ಉದ್ವಿಗ್ನತೆ ಉಂಟುಮಾಡುವ ರೀತಿಯಲ್ಲಿ ಮಾತನಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ನೀಟ್ ಪ್ರತಿಭಟನಾಕಾರರ ವಿರುದ್ಧವೂ ಅವಾಚ್ಯ ಪದ ಬಳಕೆ ಆರೋಪ;
ದೂರುದಾರರ ಪ್ರಕಾರ, ಅದೇ ಭಾಷಣದಲ್ಲಿ ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧವೂ ಅವಾಚ್ಯ ಪದಗಳನ್ನು ಬಳಸಿದ್ದು, ಪ್ರತಿಭಟನಾಕಾರರನ್ನು ನಿಂದಿಸುವ ಮೂಲಕ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ಪ್ರಯತ್ನ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಲಿಖಿತ ದೂರು ಸಲ್ಲಿಸಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm