ಬ್ರೇಕಿಂಗ್ ನ್ಯೂಸ್
30-07-26 02:16 pm HK News Staffer ಕ್ರೈಂ
ಕೋಲ್ಕತ್ತಾ, ಜುಲೈ 30: ಪಶ್ಚಿಮ ಬಂಗಾಳದ ಬಿರ್ಭಮ್ ಜಿಲ್ಲೆಯಲ್ಲಿ ಮರಳು ಮಾಫಿಯಾ ವಿರುದ್ಧ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಬೆಚ್ಚಿಬೀಳಿಸುವ ಪ್ರಮಾಣದ ಅಕ್ರಮ ಸಂಪತ್ತು ಪತ್ತೆಯಾಗಿದೆ. ನಿವೃತ್ತ ಸರ್ಕಾರಿ ಬಸ್ ಚಾಲಕನಾಗಿದ್ದ ವ್ಯಕ್ತಿಯ ಮನೆಯಲ್ಲಿ ₹28.5 ಕೋಟಿ ನಗದು ಹಾಗೂ ₹20 ಕೋಟಿಗೂ ಅಧಿಕ ಮೌಲ್ಯದ ಸುಮಾರು 15 ಕೆಜಿ ಚಿನ್ನ ಪತ್ತೆಯಾಗಿದ್ದು, ಪ್ರಕರಣ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದೆ.
ದಾಳಿಯಲ್ಲಿ ಪತ್ತೆಯಾದ ಅಪಾರ ಪ್ರಮಾಣದ ನಗದು ಮತ್ತು ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ನಿವೃತ್ತ ಬಸ್ ಚಾಲಕ ಮಿನಾರ್ ಹಾಗೂ ಅವರ ಪುತ್ರನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಅಧಿಕಾರಿಗಳ ಪ್ರಕಾರ, ಇತರ ಸ್ಥಳಗಳಲ್ಲೂ ಅಕ್ರಮವಾಗಿ ಹಣ ಸಂಗ್ರಹಿಸಲಾಗಿದೆಯೇ ಎಂಬುದರ ಬಗ್ಗೆ ತನಿಖೆ ಮುಂದುವರಿದಿದೆ.
ಕಲ್ಲು ವ್ಯಾಪಾರದಿಂದ ಕೋಟಿ ಕೋಟಿ ಆಸ್ತಿ ?
ಮಿನಾರ್ ಸರ್ಕಾರಿ ಬಸ್ ಚಾಲಕನಾಗಿ ನಿವೃತ್ತಿಯಾದ ಬಳಿಕ ಕಲ್ಲು ವ್ಯಾಪಾರದಲ್ಲಿ ತೊಡಗಿಕೊಂಡು ದೊಡ್ಡ ಮಟ್ಟದ ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಅಲ್ಲದೆ, ಈತ ತಲೆಮರೆಸಿಕೊಂಡಿರುವ ಟಿಲ್ಲು ಮಂಡಲ್ ಅಲಿಯಾಸ್ ಮೊಹಮ್ಮದ್ ನಜೀಬುದ್ದೀನ್ ಅವರ ಸೋದರ ಮಾವ ಎಂದು ತನಿಖೆಯಲ್ಲಿ ತಿಳಿದುಬಂದಿದೆ.
ಟಿಲ್ಲು ಮಂಡಲ್, ಬಿರ್ಭಮ್ ಜಿಲ್ಲೆಯ ತೃಣಮೂಲ ಕಾಂಗ್ರೆಸ್ ನಾಯಕ ಅನುಬ್ರತಾ ಮಂಡಲ್ ಅವರ ಆಪ್ತನಾಗಿದ್ದಾನೆ ಎನ್ನಲಾಗಿದ್ದು, ಈ ನಂಟಿನ ಬಗ್ಗೆಯೂ ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಹಿಂದೆಯೂ ಸಿಬಿಐ ವಿಚಾರಣೆ
ಮಿನಾರ್ ಹೆಸರು ಈ ಹಿಂದೆ ಕೂಡ ದನ ಕಳ್ಳಸಾಗಣೆ ಸಂಬಂಧಿತ ಬಹುಕೋಟಿ ಹಗರಣದಲ್ಲಿ ಕೇಳಿಬಂದಿತ್ತು. ಆ ಪ್ರಕರಣದಲ್ಲಿ ಅವರನ್ನು ಸಿಬಿಐ ಅಧಿಕಾರಿಗಳು ವಿಚಾರಣೆ ನಡೆಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮರಳು ಮಾಫಿಯಾ ವಿರುದ್ಧ ಕಠಿಣ ಕ್ರಮ ಮುಂದುವರಿಕೆ
ಈ ಕಾರ್ಯಾಚರಣೆಯನ್ನು ಪಶ್ಚಿಮ ಬಂಗಾಳ ಸರ್ಕಾರ ಶ್ಲಾಘಿಸಿದೆ. ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪ್ರಕಟಿಸಿದ ಸಂದೇಶದಲ್ಲಿ, ಮರಳು ಮಾಫಿಯಾ ವಿರುದ್ಧ ನಿಖರ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರ ಕಾರ್ಯ ಶ್ಲಾಘನೀಯ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಪೊಲೀಸರು, ಡಿಜಿಪಿ, ಬಿರ್ಭಮ್ ಎಸ್ಪಿ ಹಾಗೂ ಜಿಲ್ಲಾ ಪೊಲೀಸ್ ಸಿಬ್ಬಂದಿಯ ತ್ವರಿತ ಮತ್ತು ವೃತ್ತಿಪರ ಕಾರ್ಯವೈಖರಿಯನ್ನು ಮೆಚ್ಚಿಕೊಂಡಿರುವ ಅವರು, ಭ್ರಷ್ಟಾಚಾರದ ವಿರುದ್ಧ ಸರ್ಕಾರ 'ಶೂನ್ಯ ಸಹಿಷ್ಣುತೆ' ನೀತಿಯನ್ನು ಅನುಸರಿಸುತ್ತಿದ್ದು, ಸಾರ್ವಜನಿಕ ಸಂಪತ್ತನ್ನು ದುರುಪಯೋಗಪಡಿಸಿಕೊಂಡ ಯಾರನ್ನೂ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಮಾಫಿಯಾ ಜಾಲ, ಅಕ್ರಮ ಹಣಕಾಸು ವ್ಯವಹಾರ ಹಾಗೂ ಸಾರ್ವಜನಿಕ ಸಂಪನ್ಮೂಲಗಳ ದುರ್ಬಳಕೆಯ ವಿರುದ್ಧ ಮುಂದೆಯೂ ಇಂತಹ ಕಾರ್ಯಾಚರಣೆಗಳು ನಿರಂತರವಾಗಿ ನಡೆಯಲಿವೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm