ಬ್ರೇಕಿಂಗ್ ನ್ಯೂಸ್
31-07-26 02:21 pm HK News Staffer ಕ್ರೈಂ
ಮಂಗಳೂರು, ಜುಲೈ 31: 2015ರಲ್ಲಿ ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣದಲ್ಲಿ ನೇರ ಭಾಗಿಯಾಗಿ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಮಲ್ಲೇನಹಳ್ಳಿ ನಿವಾಸಿ ಚುಂಕಿ ಆಕಾಶಭವನ @ ಸಂತೋಷ್ ಎಸ್ (34) ಬಂಧಿತ ವ್ಯಕ್ತಿ. 2015ರಲ್ಲಿ ಮಂಗಳೂರು ನಗರದ ಆಕಾಶಭವನದಲ್ಲಿ ನಡೆದ ಮದುವೆಯ ಮದರಂಗಿ ಶಾಸ್ತ್ರದ ಸಂದರ್ಭದಲ್ಲಿ ಅಶೋಕ ಕುಮಾರ ಕೊಟ್ಟಾರಿ ಹಾಗೂ ಆರೋಪಿ ಜಗ್ಗು ಎಂಬುವರ ನಡುವೆ ಮಾತಿನ ಚಕಮಕಿ ನಡೆದ ವಿಚಾರದಲ್ಲಿ ಚುಂಕಿ ಆಕಾಶಭವನ @ ಸಂತೋಷ್ ಇತರ ಆರೋಪಿಗಳಾದ ರಂಜಿತ್, ಧನು, ಧೂಮ, ಸ್ವೀಟಿ @ ನರೇಶ್ ಮತ್ತು ಜಗ್ಗು ರವರ ಜೊತೆ ಸೇರಿಕೊಂಡು ಅಶೋಕ ಕುಮಾರ್ ಕೊಟ್ಟಾರಿ ಅವರಿಗೆ ತಲವಾರಿನಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಗಂಭೀರ ಗಾಯವುಂಟು ಮಾಡಿ ಕೊಲೆಯತ್ನ ನಡೆಸಿದ್ದು, ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ 135/2015 ರಂತೆ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
ಪ್ರಕರಣದಲ್ಲಿ ಪ್ರಮುಖ ಆರೋಪಿ ಚುಂಕಿ ಆಕಾಶಭವನ ಎಂಬಾತ ಪ್ರಕರಣ ದಾಖಲಾದ ದಿನದಿಂದ ದಸ್ತಗಿರಿಗೆ ಸಿಗದೇ ಸುಮಾರು 11 ವರ್ಷಗಳಿಂದ ತಲೆಮರೆಸಿದ್ದು, ನ್ಯಾಯಾಲಯವು ಆತನ ವಿರುದ್ಧ 25/2025 ರಂತೆ ಎಲ್ಪಿಸಿ (LPC) ವಾರಂಟ್ ಹೊರಡಿಸಿತ್ತು. ಯಾವುದೇ ಸುಳಿವು ಇಲ್ಲದ ಈತನ ಬಗ್ಗೆ ಬಹಳ ಸಮಯದಿಂದ ಮಾಹಿತಿ ಸಂಗ್ರಹಿಸುತ್ತಿದ್ದ ಸಿಸಿಬಿ ಪೊಲೀಸರಿಗೆ ಈತ ಶಿವಮೊಗ್ಗದಲ್ಲಿ ಇದ್ದಾನೆಂದು ಖಚಿತ ಮಾಹಿತಿ ಸಂಗ್ರಹಿಸಿ ಜುಲೈ 29 ರಂದು ಹಾವೇರಿ ಜಿಲ್ಲೆಯ ಚಿಕ್ಕೆರೂರು ಎಂಬಲ್ಲಿ ವಶಕ್ಕೆ ಪಡೆದು ಕಾವೂರು ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಹಾಗೂ ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm