ಬ್ರೇಕಿಂಗ್ ನ್ಯೂಸ್
04-08-26 02:46 pm HK News Staffer ಕ್ರೈಂ
ಚೆನ್ನೈ, ಆಗಸ್ಟ್ 04: ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ವಿಜಯ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ನನ್ನ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ನಡೆದ ಪ್ರತಿಭಟನೆಯಲ್ಲಿ ನೀಡಿದ ಭಾಷಣವೇ ಈಗ ರಾಜಕೀಯ ಬಿರುಗಾಳಿಗೆ ಕಾರಣವಾಗಿದ್ದು, ನೀಲಂಕರೈನಲ್ಲಿರುವ ಅವರ ನಿವಾಸಕ್ಕೆ ತೆರಳಿದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ತಂಜಾವೂರಿನಲ್ಲಿ ಮೇಕೆದಾಟು ಯೋಜನೆಗೆ ವಿರೋಧ ವ್ಯಕ್ತಪಡಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಖಂಡಿಸುವ ಜೊತೆಗೆ ಡೆಲ್ಟಾ ಜಿಲ್ಲೆಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಬೇಕೆಂದು ಒತ್ತಾಯಿಸಿ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಈ ವೇಳೆ ಮುಖ್ಯಮಂತ್ರಿ ವಿಜಯ್ ವಿರುದ್ಧ ಅವರು ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಆಡಳಿತ ಪಕ್ಷದ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದರು.
ಈ ಭಾಷಣದ ಬಳಿಕ ತಂಜಾವೂರಿನ ಮಹಿಳೆಯೊಬ್ಬರು ಉದಯನಿಧಿ ವಿರುದ್ಧ ಪೊಲೀಸರಿಗೆ ಅಧಿಕೃತ ದೂರು ಸಲ್ಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನೀಲಂಕರೈನಲ್ಲಿರುವ ಉದಯನಿಧಿ ಸ್ಟಾಲಿನ್ ಅವರ ನಿವಾಸಕ್ಕೆ ತೆರಳಿ ಬಂಧನ ಕಾರ್ಯಾಚರಣೆ ನಡೆಸಿದರು.
ಬಂಧನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉದಯನಿಧಿ ಸ್ಟಾಲಿನ್, "ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ದಾಖಲಿಸಲಾಗಿದೆ. ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ. ಇಂತಹ ಪ್ರಕರಣಗಳಿಗೆ ನಾನು ಹೆದರುವುದಿಲ್ಲ. ಪರಿಣಾಮಗಳನ್ನು ಎದುರಿಸಲು ನಾನು ಸಂಪೂರ್ಣ ಸಿದ್ಧನಿದ್ದೇನೆ" ಎಂದು ತಿರುಗೇಟು ನೀಡಿದರು.
ತ್ರಿಶಾ ಹೆಸರು ಉಲ್ಲೇಖಿಸಿ ಮಾಡಿದ ಹೇಳಿಕೆ ವೈರಲ್ ;
ಕಾವೇರಿ ಪ್ರತಿಭಟನೆಯ ವೇಳೆ ನಟಿ ತ್ರಿಶಾ ಅವರನ್ನು ಉಲ್ಲೇಖಿಸಿ ಉದಯನಿಧಿ ನೀಡಿದ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಹೇಳಿಕೆಯನ್ನು ವಿರೋಧ ಪಕ್ಷಗಳು ಹಾಗೂ ನೆಟ್ಟಿಗರು ಡಬಲ್ ಮೀನಿಂಗ್ ಹೇಳಿಕೆ ಎಂದು ಟೀಕಿಸಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.
ಭಾಷಣದಲ್ಲಿ, "ಕಾವೇರಿ ನೀರಿನ ಒಂದು ಹನಿಯೂ ಸಿಕ್ಕಿಲ್ಲ. ಆದರೆ ಮುಖ್ಯಮಂತ್ರಿ ವಿಜಯ್ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದರ ಬಗ್ಗೆ ಮಾತ್ರ ತಲೆಕೆಡಿಸಿಕೊಂಡಿದ್ದಾರೆ" ಎಂದು ಆರೋಪಿಸಿದ ಉದಯನಿಧಿ, "ನೀರು ಬೇರೆಡೆಗೆ ತಲುಪಲಿ ಅಥವಾ ತಲುಪದಿರಲಿ, ಅದು ಅಲ್ಲಿಗೆ ತಲುಪಬೇಕು" ಎಂದು ಹೇಳಿ ಬಳಿಕ ಅದು ಕಾವೇರಿ ನೀರಿನ ಉಲ್ಲೇಖ ಎಂದು ಸ್ಪಷ್ಟಪಡಿಸಿದ್ದರು.
ಹೈಕೋರ್ಟ್ ಮೊರೆ ಹೋದ ಡಿಎಂಕೆ;
ಬಂಧನದ ವಿರುದ್ಧ ಡಿಎಂಕೆ ಪರವಾಗಿ ಮದ್ರಾಸ್ ಹೈಕೋರ್ಟ್ನಲ್ಲಿ ತುರ್ತು ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯ, ಮಧ್ಯಾಹ್ನ ವಿಚಾರಣೆ ನಡೆಸುವುದಾಗಿ ತಿಳಿಸಿದ್ದು, ಅಷ್ಟರವರೆಗೆ ಯಾವುದೇ ಕಠಿಣ ಕ್ರಮ ಕೈಗೊಳ್ಳದಂತೆ ಸರ್ಕಾರಿ ಅಭಿಯೋಜಕರ ಮೂಲಕ ಪೊಲೀಸರಿಗೆ ಸೂಚನೆ ನೀಡಿತ್ತು. ಆದರೆ ನಂತರ ಪೊಲೀಸರು ಉದಯನಿಧಿಯನ್ನು ಬಂಧಿಸಿದ್ದು, ಪ್ರಕರಣ ಇದೀಗ ಮತ್ತಷ್ಟು ರಾಜಕೀಯ ಸ್ವರೂಪ ಪಡೆದುಕೊಂಡಿದೆ.
13-08-26 08:09 pm
HK News Staffer
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
ಐಷಾರಾಮಿ ಹೊಟೇಲ್ ಬಳಿಕ ಸರ್ಕಾರಿ ಕಚೇರಿಗಳ ಕ್ಯಾಂಟೀನ್...
13-08-26 02:22 pm
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 04:29 pm
HK News Staffer
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm
ಮದುವೆ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯ...
13-08-26 01:17 pm
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm