ಬ್ರೇಕಿಂಗ್ ನ್ಯೂಸ್
05-08-26 04:42 pm HK News Staffer ಕ್ರೈಂ
ಉಳ್ಳಾಲ, ಆಗಸ್ಟ್ 05: ಬಾಡಿಗೆ ಮನೆ ಬೇಕೆಂದು ನಂಬಿಸಿ ಮನೆಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು, ವೃದ್ಧೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿ ಪರಾರಿಯಾದ ಘಟನೆ ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಕಾಯರಗೋಳಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಸಿಸಿಟಿವಿ ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಕಾಯರಗೋಳಿ ನಿವಾಸಿ ಭವಾನಿ ಅವರ ಮನೆಯಲ್ಲಿ ಆಗಸ್ಟ್ 3ರಂದು ಮಧ್ಯಾಹ್ನ ಸುಮಾರು 1.15ರ ವೇಳೆಗೆ ಈ ಕೃತ್ಯ ನಡೆದಿದೆ. ಮಗ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ಬಂದ ಇಬ್ಬರು ಅಪರಿಚಿತ ಯುವಕರು, "ನಾವು ಇನ್ಫೋಸಿಸ್ನಲ್ಲಿ ಕೆಲಸ ಮಾಡುತ್ತೇವೆ. ನಮಗೆ ಬಾಡಿಗೆ ಮನೆ ಬೇಕು. ಬ್ರಾಹ್ಮಣರಿಗೆ ಮನೆ ಇದೆಯೇ?" ಎಂದು ಕೇಳಿದ್ದಾರೆ.
ಭವಾನಿ ಅವರು "ಮಗ ಬಂದ ನಂತರ ಕೇಳಿ ಹೇಳುತ್ತೇನೆ" ಎಂದಾಗ, ಆರೋಪಿಗಳು ಮಗನ ಮೊಬೈಲ್ ಸಂಖ್ಯೆಯನ್ನು ಕೇಳಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ತಿಳಿಸಿದ ಬಳಿಕ ವೃದ್ಧೆ ಬಾಗಿಲು ಮುಚ್ಚಲು ಮುಂದಾದಾಗ, ಆರೋಪಿಗಳು ಬಾಗಿಲನ್ನು ಬಲವಾಗಿ ತಳ್ಳಿ ಮನೆಯೊಳಗೆ ನುಗ್ಗಿದ್ದಾರೆ.
ಬಾಯಿ ಮುಚ್ಚಿ ಹಲ್ಲೆ... ಚಿನ್ನ ಕಸಿದು ಪರಾರಿ;
ಬಾಗಿಲು ತಳ್ಳಿದ ರಭಸಕ್ಕೆ ವೃದ್ಧೆ ಕೆಳಗೆ ಬಿದ್ದಿದ್ದು, ಅವರು ಬೊಬ್ಬೆ ಹಾಕುತ್ತಿದ್ದಂತೆ ಒಬ್ಬ ಆರೋಪಿ ಅವರ ಬಾಯಿಯನ್ನು ಬಿಗಿಯಾಗಿ ಒತ್ತಿಹಿಡಿದಿದ್ದಾನೆ. ಮತ್ತೊಬ್ಬ ಆರೋಪಿ ಕುತ್ತಿಗೆಯಲ್ಲಿದ್ದ 16 ಗ್ರಾಂ ತೂಕದ ಚಿನ್ನದ ಸರ ಹಾಗೂ ಬಲಗೈಯಲ್ಲಿದ್ದ 8 ಗ್ರಾಂ ತೂಕದ ಚಿನ್ನದ ಬಳೆಯನ್ನು ಬಲವಂತವಾಗಿ ಕಸಿದುಕೊಂಡಿದ್ದಾನೆ.
ಇನ್ನೂ ಎಡಗೈಯಲ್ಲಿದ್ದ ಬಳೆಯನ್ನೂ ಕಸಿದುಕೊಳ್ಳಲು ಯತ್ನಿಸಿದ್ದು, ಸಾಧ್ಯವಾಗದಾಗ ವೃದ್ಧೆಯ ಕೈಗೆ ಗಾಯಗೊಳಿಸಿ, ಮನೆಯ ಬಾಗಿಲನ್ನು ಹೊರಗಿನಿಂದ ಚಿಲಕ ಹಾಕಿ ಪರಾರಿಯಾಗಿದ್ದಾರೆ.
ದರೋಡೆಕೋರರ ಹಲ್ಲೆಯಿಂದ ವೃದ್ಧೆಯ ಕೈ ಹಾಗೂ ಮಣಿಗಂಟಿಗೆ ತೀವ್ರ ಗಾಯಗಳಾಗಿದ್ದು, ದೋಚಲ್ಪಟ್ಟ ಚಿನ್ನಾಭರಣಗಳ ಒಟ್ಟು ಮೌಲ್ಯ ಸುಮಾರು ₹3 ಲಕ್ಷ ಎಂದು ಅಂದಾಜಿಸಲಾಗಿದೆ. ಘಟನೆಯ ಸುಮಾರು ಅರ್ಧ ಗಂಟೆಯ ಬಳಿಕ ಮಗಳು ಪ್ರತಿಭಾ ಮನೆಗೆ ಬಂದಾಗ ವೃದ್ಧೆ ಗಾಯಗೊಂಡಿರುವುದು ಮತ್ತು ದರೋಡೆ ನಡೆದಿರುವುದು ಬೆಳಕಿಗೆ ಬಂದಿದೆ.
ಸಿಸಿಟಿವಿ ಆಧರಿಸಿ ಆರೋಪಿಗಳಿಗೆ ಶೋಧ;
ಪ್ರಕರಣ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am