ಬ್ರೇಕಿಂಗ್ ನ್ಯೂಸ್
05-08-26 09:08 pm HK News Staffer ಕ್ರೈಂ
ಉಳ್ಳಾಲ, ಆ.05: ಅವಿವಾಹಿತ ಯುವಕನೋರ್ವ ಮನೆಯಲ್ಲೇ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಸೋಮೇಶ್ವರ ಬಳಿಯ ಪಿಲಾರು ಸರಕಾರಿ ಶಾಲೆಯ ಬಳಿ ನಡೆದಿದ್ದು, ಮೃತ ಯುವಕ ಡೆತ್ ನೋಟಿನಲ್ಲಿ ಸಾವಿಗೆ ಕಾರಣರಾದ ಮೂವರು ಯುವಕರ ಹೆಸರನ್ನು ಉಲ್ಲೇಖಿಸಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿತಿನ್ ಕುಮಾರ್ ಯಾನೆ ನೀತು(35) ಆತ್ಮಹತ್ಯೆಗೈದ ಯುವಕ. ಮೂಲತಃ ಕೋಟೆಕಾರು ಕೊಂಡಾಣ ಮಿತ್ರನಗರ ನಿವಾಸಿಯಾಗಿರುವ ನಿತಿನ್, ಪಿಲಾರಿನ ಭಾವ (ಅಕ್ಕನ ಗಂಡ) ಪ್ರಶಾಂತ್ ಪಕ್ಕಳ ಅವರ ಮನೆಯಲ್ಲಿ ಮೂರು ವರ್ಷಗಳಿಂದ ವಾಸವಿದ್ದ. ತೊಕ್ಕೊಟ್ಟು ಕಾಪಿಕಾಡಿನ ಕ್ಯಾಟರಿಂಗ್ ಸಂಸ್ಥೆಯೊಂದರಲ್ಲಿ ಉದ್ಯೋಗದಲ್ಲಿದ್ದ ನಿತಿನ್ ಕಳೆದ ಐದು ವರುಷಗಳಿಂದ ಕಾಲಿನ ವೆರಿಕೋಸ್ ಸಮಸ್ಯೆಯಿಂದ ಬಳಲುತ್ತಿದ್ದನಂತೆ.
ಮೂರು ದಿನಗಳಿಂದ ನಿತಿನ್ ಜ್ವರ ಭಾದೆಯಿಂದಾಗಿ ಮನೆಯಲ್ಲೇ ಉಳಿದಿದ್ದು, ಮಂಗಳವಾರ ರಾತ್ರಿ ಊಟ ಮುಗಿಸಿ ಕೋಣೆಗೆ ಸೇರಿದ ಬಳಿಕ ಬುಧವಾರ ಬೆಳಗ್ಗೆ ಫ್ಯಾನಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ನಿತಿನ್ ಧರಿಸಿದ್ದ ಪ್ಯಾಂಟ್ ಜೇಬಿನಲ್ಲಿ ಚೀಟಿಯೊಂದು ಸಿಕ್ಕಿದ್ದು ಅದರಲ್ಲಿ ನನ್ನ ಸಾವಿಗೆ ಚರಣ್, ಪುಟ್ಟ, ಕಾರ್ತಿಕ್ ಕಾರಣ ಎಂಬುದಾಗಿ ಮೂವರ ಹೆಸರನ್ನ ಉಲ್ಲೇಖಿಸಲಾಗಿದೆ. ಈ ಮೂವರ ದುಷ್ಪ್ರೇರಣೆಯಿಂದಲೇ ನಿತಿನ್ ಆತ್ಮಹತ್ಯೆಗೈಯಲು ಕಾರಣವಾಗಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ನಿತಿನ್ ಅವರ ಬಾವ ಪ್ರಶಾಂತ್ ಪಕ್ಕಳ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದಾರೆ. ಉಳ್ಳಾಲ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am