ಬ್ರೇಕಿಂಗ್ ನ್ಯೂಸ್
07-08-26 12:35 pm HK News Staffer ಕ್ರೈಂ
ಬೆಂಗಳೂರು, ಆಗಸ್ಟ್ 07: ಆಗಸ್ಟ್ 06 ಬೆಂಗಳೂರಿನಲ್ಲಿ ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಇಬ್ಬರು ಯುವತಿಯರ ಸಾವಿನ ಹಿಂದೆ ಮನಕಲಕುವ ಕಾರಣ ಬೆಳಕಿಗೆ ಬಂದಿದೆ. 22 ವರ್ಷದ ಸಿರ್ಜನಾ ಮತ್ತು 23 ವರ್ಷದ ರಿತಾ ಪರಸ್ಪರ ಪ್ರೀತಿಸುತ್ತಿದ್ದು, ಒಟ್ಟಿಗೆ ಬದುಕುವ ಕನಸು ನನಸಾಗುವುದಿಲ್ಲ ಎಂಬ ನೋವಿನಿಂದಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ.
ಘಟನೆ ನಡೆದ ತಕ್ಷಣ ಪೊಲೀಸರು ತನಿಖೆ ಆರಂಭಿಸಿ, ಮೃತ ಯುವತಿಯರ ಕುಟುಂಬಸ್ಥರು ಹಾಗೂ ಸಂಬಂಧಿಕರನ್ನು ವಿಚಾರಣೆ ನಡೆಸಿದರು. ಈ ವೇಳೆ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗುವ ಆಸೆ ಹೊಂದಿದ್ದರು. ಆದರೆ ಕುಟುಂಬ ಮತ್ತು ಸಮಾಜ ತಮ್ಮ ಸಂಬಂಧವನ್ನು ಒಪ್ಪಿಕೊಳ್ಳುವುದಿಲ್ಲ ಎಂಬ ಭಯವೇ ಅವರನ್ನು ಈ ದುರ್ಘಟನೆಯತ್ತ ತಳ್ಳಿದೆ ಎಂಬ ಸಂಗತಿ ಬೆಳಕಿಗೆ ಬಂದಿದೆ.
'ಒಟ್ಟಿಗೆ ಬದುಕಲು ಆಗದಿದ್ದರೆ, ಒಟ್ಟಿಗೇ ಸಾಯೋಣ'
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಸಿರ್ಜನಾ ಮತ್ತು ರಿತಾ ಒಟ್ಟಿಗೆ ಜೀವನ ಸಾಗಿಸಲು ಬಯಸಿದ್ದರು. ಆದರೆ ಸಮಾಜದ ವಿರೋಧ ಮತ್ತು ಕುಟುಂಬದ ಒತ್ತಡದಿಂದ ತಮ್ಮ ಸಂಬಂಧಕ್ಕೆ ಭವಿಷ್ಯವಿಲ್ಲ ಎಂಬ ಆತಂಕದಲ್ಲಿ ಇಬ್ಬರೂ ಒಂದೇ ಸಮಯದಲ್ಲಿ ನೇಣಿಗೆ ಶರಣಾಗಿ ಜೀವ ಕೊಟ್ಟಿದ್ದಾರೆ ಎನ್ನಲಾಗಿದೆ.
ಚಿಕ್ಕ ವಯಸ್ಸಿನಿಂದಲೇ ಜೊತೆಯಾಗಿ ಬೆಳೆದಿದ್ದರು
ಸಿರ್ಜನಾ ಮತ್ತು ರಿತಾ ಸಂಬಂಧಿಕರಾಗಿದ್ದು, ನೇಪಾಳದಲ್ಲಿ ಒಟ್ಟಿಗೆ ಓದಿ ಬೆಳೆದಿದ್ದರು. ಬಾಲ್ಯದಿಂದಲೇ ಇಬ್ಬರೂ ಬೇರ್ಪಡದೆ ಇದ್ದ ಕಾರಣ, ಅವರ ಬಗ್ಗೆ ಊರಿನಲ್ಲಿ ಮಾತುಕತೆಗಳು ಆರಂಭವಾಗಿದ್ದವು. ಇದಾದ ಬಳಿಕ ಕುಟುಂಬಸ್ಥರು ಇಬ್ಬರನ್ನೂ ಬೆಂಗಳೂರಿಗೆ ಕರೆಸಿಕೊಂಡಿದ್ದರು.
ಬೆಂಗಳೂರುಗೆ ಬಂದ ನಂತರವೂ ಅವರು ಬೇರೆ ಬೇರೆ ಕಡೆ ವಾಸವಾಗಿದ್ದರೂ, ವಾರದಲ್ಲಿ ಮೂರು-ನಾಲ್ಕು ಬಾರಿ ಭೇಟಿಯಾಗಿ ಸಮಯ ಕಳೆಯುತ್ತಿದ್ದರು. ರಿತಾ ಫ್ರೇಜರ್ ಟೌನ್ನಲ್ಲಿ, ಸಿರ್ಜನಾ ಜಕ್ಕೂರಿನಲ್ಲಿ ವಾಸವಾಗಿದ್ದರು.

ಮದುವೆ ಮಾತೇ ಅಂತಿಮ ನಿರ್ಧಾರಕ್ಕೆ ಕಾರಣ?
ಘಟನೆ ನಡೆದ ದಿನ ಇಬ್ಬರೂ ಸಂಬಂಧಿಕರ ಮನೆಗೆ ಊಟಕ್ಕೆ ತೆರಳಿದ್ದರು. ಇದೇ ವೇಳೆ ಕುಟುಂಬದಲ್ಲಿ ಮದುವೆ ವಿಷಯ ಪ್ರಸ್ತಾಪವಾಗಿತ್ತು. "ಸಮಾಜ ನಮ್ಮನ್ನು ಒಟ್ಟಿಗೆ ಬದುಕಲು ಬಿಡುವುದಿಲ್ಲ" ಎಂದು ಇಬ್ಬರೂ ಮಾತನಾಡಿಕೊಂಡಿದ್ದರು ಎನ್ನಲಾಗಿದೆ. ಈ ಭಾವನಾತ್ಮಕ ಒತ್ತಡವೇ ಆತ್ಮಹತ್ಯೆಯ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm