ಬ್ರೇಕಿಂಗ್ ನ್ಯೂಸ್
07-08-26 04:22 pm HK News Staffer ಕ್ರೈಂ
ಕೊಲ್ಲೂರು , ಆಗಸ್ಟ್ 07: ಮನೆಯಲ್ಲಿ ಸಹೋದರಿಯರ ನಡುವೆ ಬಟ್ಟೆ ಇಡುವ ವಿಚಾರಕ್ಕೆ ನಡೆದ ಸಣ್ಣ ಮಾತಿನ ಚಕಮಕಿ ಬಳಿಕ ತಾಯಿ ಬೈದಿದ್ದಕ್ಕೆ ಮನನೊಂದ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿಯೊಬ್ಬಳು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಪ್ರಮಿತಾ (18) ಎಂದು ಗುರುತಿಸಲಾಗಿದೆ. ಮೃತ ಪ್ರಮಿತಾ ಬೆಳ್ಳಾಲ ಗ್ರಾಮದ ಗಂಗಮಾತಾ ನಿವಾಸಿ ಚಂದ್ರಾವತಿ ಮತ್ತು ಪ್ರಭಾಕರ ನಾಯಕ್ ದಂಪತಿಯ ಹಿರಿಯ ಪುತ್ರಿಯಾಗಿದ್ದು, ಕುಂದಾಪುರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು.
ದುರಂತಕ್ಕೆ ತಿರುಗಿದ ಸಣ್ಣ ಜಗಳ ;
ಆಗಸ್ಟ್ 6ರ ಬೆಳಗ್ಗೆ ಮನೆಯಲ್ಲಿ ಬಟ್ಟೆಗಳನ್ನು ಇಡುವ ವಿಚಾರವಾಗಿ ಪ್ರಮಿತಾ ಹಾಗೂ ಆಕೆಯ ತಂಗಿಯ ನಡುವೆ ಮಾತಿನ ಚಕಮಕಿ ನಡೆದಿತ್ತು. ಈ ವೇಳೆ ತಾಯಿ ಚಂದ್ರಾವತಿ ಇಬ್ಬರನ್ನೂ ಬೈದು ಜಗಳವನ್ನು ನಿಲ್ಲಿಸಿದ್ದರು. ತಾಯಿ ಬೈದಿದ್ದಕ್ಕೆ ಬೇಸರಗೊಂಡ ಪ್ರಮಿತಾ ತನ್ನ ಕೋಣೆಗೆ ತೆರಳಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಳು. ಸಿಡುಕಿನ ಸ್ವಭಾವದವಳಾಗಿದ್ದ ಕಾರಣ ಸ್ವಲ್ಪ ಹೊತ್ತಿನ ಬಳಿಕ ತಾನೇ ಹೊರಬಂದು ಕಾಲೇಜಿಗೆ ಹೋಗಬಹುದು ಎಂದು ಭಾವಿಸಿ ತಾಯಿ ಕೆಲಸಕ್ಕೆ ತೆರಳಿದ್ದರು.
ನಂತರ ಕುಟುಂಬದ ಮಗ ಕರೆ ಮಾಡಿ "ಅಕ್ಕ ಬಾಗಿಲು ತೆರೆಯುತ್ತಿಲ್ಲ" ಎಂದು ತಿಳಿಸಿದಾಗ ಆತಂಕಗೊಂಡ ತಾಯಿ, ಸಂಬಂಧಿ ವಿಘ್ನೇಶ್ ಅವರಿಗೆ ಮನೆಗೆ ಹೋಗುವಂತೆ ತಿಳಿಸಿದ್ದಾರೆ. ವಿಘ್ನೇಶ್ ಮನೆಗೆ ತೆರಳಿ ಕೊಠಡಿಯ ಹಿಂಭಾಗದ ಕಿಟಕಿಯಿಂದ ನೋಡಿದಾಗ, ಪ್ರಮಿತಾ ಫ್ಯಾನ್ಗೆ ಸೀರೆಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ವಿಷಯ ತಿಳಿಯುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಮೃತಳ ತಾಯಿ ಚಂದ್ರಾವತಿ ನೀಡಿದ ದೂರಿನ ಆಧಾರದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (UDR) ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm