ಬ್ರೇಕಿಂಗ್ ನ್ಯೂಸ್
07-08-26 09:23 pm HK News Staffer ಕ್ರೈಂ
ಉಳ್ಳಾಲ, ಆ.7: ಮುಡಿಪು ಸಮೀಪದ ಕಾಯರ್ ಗೋಳಿ ಎಂಬಲ್ಲಿನ ಮನೆಯೊಂದಕ್ಕೆ ಹಾಡಹಗಲೇ ನುಗ್ಗಿ ಒಂಟಿ ವೃದ್ಧೆಯೋರ್ವರಿಗೆ ಹಲ್ಲೆ ನಡೆಸಿ ಚಿನ್ನದ ಸರ ಹಾಗೂ ಬಲೆಗಳನ್ನು ದರೋಡೆಗೈದು ಪರಾರಿಯಾಗಿದ್ದ ಇಬ್ಬರು ದರೋಡೆಕೋರರನ್ನ ಕೊಣಾಜೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉರ್ವಾ ಮಠದಕಣಿ ನಿವಾಸಿ ಬಾಲಸುಬ್ರಮಣ್ಯ(49) ಹಾಗೂ ಮೂಲತಃ ತೊಕ್ಕೊಟ್ಟು ನಿವಾಸಿ ಪ್ರಸ್ತುತ ಮಂಗಳೂರಿನ ಬೊಕ್ಕಪಟ್ಣದಲ್ಲಿ ನೆಲೆಸಿರುವ ಶ್ಯಾಮ್ ಕುಮಾರ್ (33) ಬಂಧಿತ ಆರೋಪಿಗಳು. ಮುಡಿಪು ಕಾಯರ್ ಗೋಳಿಯ 76 ರ ಹರೆಯದ ಭವಾನಿ ಆಚಾರ್ಯ ಎಂಬವರ ಮನೆಯಲ್ಲಿ ಆ.3ರ ಸೋಮವಾರ ದರೋಡೆ ಘಟನೆ ನಡೆದಿತ್ತು. ಭವಾನಿಯವರ ಪುತ್ರ ಕೆಲಸಕ್ಕೆ ತೆರಳಿದ್ದ ವೇಳೆ ಬಾಡಿಗೆ ಮನೆಯ ಬಗ್ಗೆ ವಿಚಾರಿಸುವ ಸೋಗಿನಲ್ಲಿ ಬಂದಿದ್ದ ಇಬ್ಬರು ಅಪರಿಚಿತರು ಏಕಾಏಕಿ ಮನೆಯೊಳಗೆ ನುಗ್ಗಿ ವೃದ್ಧೆಗೆ ಹಲ್ಲೆಗೈದು ಸರ ಹಾಗೂ ಬಲೆಯನ್ನು ಕಿತ್ತು ಪರಾರಿಯಾಗಿದ್ದರು.
ಪ್ರಕರಣದ ಆರೋಪಿಗಳ ಪತ್ತೆಗಾಗಿ ರಚಿಸಿದ ವಿಶೇಷ ತಂಡಕ್ಕೆ ದೊರೆತ ಖಚಿತ ಮಾಹಿತಿಯ ಮೇಲೆ ಶುಕ್ರವಾರ ಮಂಗಳೂರಿನ ಮರೋಳಿ ಎಂಬಲ್ಲಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಸುಲಿಗೆ ಮಾಡಲಾದ 3 ಲಕ್ಷ ರೂ. ಅಂದಾಜು ಮೌಲ್ಯದ 24 ಗ್ರಾಂ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಲಾದ ಬೈಕನ್ನು ಪೊಲೀಸರು ವಶಪಡಿಸಿದ್ದಾರೆ.
ಬಂಧಿತ ಆರೋಪಿ ಬಾಲ ಸುಬ್ರಮಣ್ಯ ವಿರುದ್ಧ ಈ ಹಿಂದೆ ಬಜಪೆ ಪೊಲೀಸ್ ಠಾಣೆಯಲ್ಲಿ 2 ಸುಲಿಗೆ ಪ್ರಕರಣಗಳು, ಮುಲ್ಕಿ ಹಾಗೂ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ತಲಾ 1 ಸುಲಿಗೆ ಪ್ರಕರಣಗಳು, ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 1 ಕಳವು ಪ್ರಕರಣ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಸುಲಿಗೆ ಪ್ರಕರಣ ದಾಖಲಾಗಿರುತ್ತವೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm