ಬ್ರೇಕಿಂಗ್ ನ್ಯೂಸ್
07-08-26 10:37 pm HK News Desk ಕ್ರೈಂ
ನವದೆಹಲಿ, ಆ.7: ದೇಶಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರೇ ಲೀಕ್ ಮಾಡಿಸಿದ್ದಾರೆಂಬ ಅನುಮಾನ ವ್ಯಕ್ತವಾಗಿದ್ದು ಈ ಕುರಿತು ಸಿಬಿಐ ತನಿಖಾಧಿಕಾರಿಗಳು ಆರೋಪ ಪಟ್ಟಿಯಲ್ಲಿ ಗುರುತಿಸಿದ್ದಾರೆ.
ಸಿಬಿಐ ಆರೋಪಪಟ್ಟಿ ಪ್ರಕಾರ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಮೂವರು ವಿಷಯ ತಜ್ಞರಾದ ರಸಾಯನ ಶಾಸ್ತ್ರದ ಪಿ.ವಿ. ಕುಲಕರ್ಣಿ, ಭೌತಶಾಸ್ತ್ರದ ಮನೀಷಾ ಸಂಜಯ್ ಹವಾಲ್ದಾರ್ ಹಾಗೂ ಸಸ್ಯಶಾಸ್ತ್ರ ಮತ್ತು ಪ್ರಾಣಿಶಾಸ್ತ್ರದ ಮನೀಷಾ ಗುರುನಾಥ್ ಮಾಂಧರೆ ಅವರು NEET ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದಿನ ಪ್ರಮುಖ ಮೂಲಗಳಾಗಿದ್ದರು ಎನ್ನಲಾಗಿದೆ. ಸಾರ್ವಜನಿಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಕುರಿತ ವಿಶೇಷ ತ್ವರಿತ ನ್ಯಾಯಾಲಯದ ಮುಂದೆ ಸಿಬಿಐ ವರದಿ ಸಲ್ಲಿಸಿದೆ.
ತನಿಖೆಯ ವೇಳೆ, ಈ ಮೂವರು ವಿಷಯ ತಜ್ಞರಿಗೆ ಅನುವಾದ ಮತ್ತು ಮರು ಅನುವಾದ ಸಂದರ್ಭದಲ್ಲಿ ಕರಡು ಕೆಲಸಕ್ಕಾಗಿ ಖಾಲಿ ಹಾಳೆಗಳನ್ನು ನೀಡಲಾಗಿತ್ತು. ಅದರಲ್ಲಿ ನಕಲು ಮಾಡಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ಪ್ರಮುಖ ಆರೋಪಿ ಎಂದು ಹೇಳಲಾಗಿರುವ ಪಿ.ವಿ. ಕುಲಕರ್ಣಿ ಈ ಹಾಳೆಗಳನ್ನು ಬಳಸಿ ರಸಾಯನಶಾಸ್ತ್ರದ ಎಲ್ಲಾ 135 ಪ್ರಶ್ನೆಗಳನ್ನು ಚೀಟಿಗಳಲ್ಲಿ ಬರೆದುಕೊಂಡು, ಹೊರಗೆ ತೆಗೆದುಕೊಂಡು ಹೋಗಿದ್ದರು ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ.
NTAಯ ಗೌಪ್ಯ ವಿಭಾಗಕ್ಕೆ ತಜ್ಞರು ಪ್ರವೇಶಿಸುವಾಗ ಅಥವಾ ಹೊರ ಬರುವಾಗ ಯಾವುದೇ ತಪಾಸಣೆ ಅಥವಾ ದೇಹ ತಪಾಸಣೆ ನಡೆಸಲಾಗುತ್ತಿರಲಿಲ್ಲ ಎಂದು ಆರೋಪ ಪಟ್ಟಿಯಲ್ಲಿ ಹೇಳಲಾಗಿದೆ. ಕುಲಕರ್ಣಿ ಸುಲಭವಾದ ಪ್ರಶ್ನೆಗಳನ್ನು ನೆನಪಿಟ್ಟುಕೊಂಡು, ಹೋಟೆಲ್ಗೆ ಮರಳಿದ ಬಳಿಕ ಅವುಗಳನ್ನು ಬರೆದುಕೊಂಡಿದ್ದರು ಎಂದು ಅದು ತಿಳಿಸಿದೆ.
NTAಯ ಸಸ್ಯಶಾಸ್ತ್ರದ ಇಂಗ್ಲಿಷ್ನಿಂದ ಮರಾಠಿಗೆ ಅನುವಾದಕಿ ಹಾಗೂ ಪ್ರಾಣಿಶಾಸ್ತ್ರದ ಮರು ಅನುವಾದಕಿಯಾಗಿದ್ದ ಮನೀಷಾ ಮಾಂಧರೆ, ದಿನದ ಕೆಲಸ ಮುಗಿಸಿ ಹೋಟೆಲ್ ಕೊಠಡಿಗೆ ಮರಳಿದ ಬಳಿಕ NCERT ಪಠ್ಯಪುಸ್ತಕಗಳಲ್ಲಿನ ಸಂಬಂಧಿತ ಪ್ಯಾರಾಗಳನ್ನು ಗುರುತಿಸಿ ಲೀಕ್ ಆಗುವಂತೆ ಮಾಡಿದ್ದರು ಎಂದು ಆರೋಪಿಸಲಾಗಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm