ಬ್ರೇಕಿಂಗ್ ನ್ಯೂಸ್
08-08-26 06:04 pm HK News Staffer ಕ್ರೈಂ
ಪಡುಬಿದ್ರಿ, ಆ. 8: “ನನ್ನ ಪತಿಯ ಸಾವು ನಮಗೆ ನಂಬಲಾರದ ಆಘಾತ ತಂದಿದೆ. ಊರಿನ ಅಭಿವೃದ್ಧಿಗೆ ಶ್ರಮಿಸಿದ ಅವರ ರಕ್ತ ಚೆಲ್ಲಿದ ದುಷ್ಕರ್ಮಿಗಳಿಗೆ ಹಾಗೂ ಇದರ ಹಿಂದಿರುವ ಸಂಚುಕೋರರಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು” ಎಂದು ಶೂಟೌಟ್ಗೆ ಬಲಿಯಾದ ಉದ್ಯಮಿ ಹಾಗೂ ರಾಜಕಾರಣಿ ಪ್ರಿನ್ಸ್ ಡೇವಿಡ್ ಡಿಸೋಜಾ ಅವರ ಪತ್ನಿ ಪ್ರಿಯಾ ಡೇವಿಡ್ ಕಣ್ಣೀರಿಡುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾ, ಪತಿ ಪ್ರತಿದಿನದಂತೆ ಊಟ ಮುಗಿಸಿ ಕಚೇರಿಗೆ ತೆರಳಿದ್ದರು. “ಅವರು ನಮ್ಮ ಬಳಿ ಉದ್ಯಮದ ಯಾವುದೇ ವಿಚಾರಗಳನ್ನು ಹಂಚಿಕೊಳ್ಳುತ್ತಿರಲಿಲ್ಲ. ಕುಟುಂಬಕ್ಕೆ ಯಾವುದೇ ಕೊರತೆಯಾಗದಂತೆ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಘಟನೆಯ ವಿಚಾರ ತಿಳಿಯುತ್ತಿದ್ದಂತೆ ತಕ್ಷಣ ಸ್ಥಳಕ್ಕೆ ಧಾವಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದೆವು. ಆದರೆ, ದುರದೃಷ್ಟವಶಾತ್ ಅವರ ಜೀವ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ” ಎಂದು ಬಿಕ್ಕಿ ಬಿಕ್ಕಿ ಅತ್ತರು.
“ಊರಿನ ಏಳಿಗೆಗೆ ಅಪಾರವಾಗಿ ಶ್ರಮಿಸಿದ್ದರು”
ಡೇವಿಡ್ ಉದ್ಯಮಿಯಾಗಿ ಮಾತ್ರವಲ್ಲದೆ ರಾಜಕಾರಣಿಯಾಗಿಯೂ ಊರಿನ ಅಭಿವೃದ್ಧಿಗೆ ಅಪಾರವಾಗಿ ಶ್ರಮಿಸಿದ್ದರು. “ನನ್ನ ಪತಿಗೆ ಈ ರೀತಿ ಆಗುತ್ತದೆ ಎಂದು ನಾವು ಕನಸಿನಲ್ಲೂ ಊಹಿಸಿರಲಿಲ್ಲ. ಕ್ರೂರವಾಗಿ ಗುಂಡು ಹಾರಿಸಿ ಕೊಲೆ ಮಾಡಿದವರಿಗೆ ತಕ್ಕ ಶಿಕ್ಷೆಯಾಗಬೇಕು. ಈ ಕೃತ್ಯದ ಹಿಂದೆ ಯಾರೇ ಇದ್ದರೂ ಅವರನ್ನು ಪತ್ತೆಹಚ್ಚಿ ಕಾನೂನಿನಡಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು” ಎಂದು ಆಗ್ರಹಿಸಿದರು.
“ಆರೋಪಿಗಳಿಗೆ ಮಾತ್ರವಲ್ಲ, ಸಂಚುಕೋರರಿಗೂ ಶಿಕ್ಷೆಯಾಗಲಿ”
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣದಲ್ಲಿ ಪೊಲೀಸರು ಶೀಘ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದು ಕುಟುಂಬಕ್ಕೆ ಸ್ವಲ್ಪ ಮಟ್ಟಿನ ಸಮಾಧಾನ ತಂದಿದೆ. “ಕೃತ್ಯ ಎಸಗಿದ ಆರೋಪಿಗಳಿಗೆ ಮಾತ್ರವಲ್ಲದೆ, ಇದರ ಹಿಂದೆ ನಿಂತು ಸಂಚು ರೂಪಿಸಿದ ರೂವಾರಿಗಳನ್ನೂ ಪತ್ತೆಹಚ್ಚಬೇಕು. ನನ್ನ ಪತಿಯ ಹತ್ಯೆಗೆ ನ್ಯಾಯ ಸಿಗಬೇಕು. ಆರೋಪಿಗಳಿಗೆ ಅತ್ಯಂತ ಕಠಿಣ ಶಿಕ್ಷೆಯಾಗಬೇಕು” ಎಂದು ಕಣ್ಣೀರಿನ ನಡುವೆಯೇ ಒತ್ತಾಯಿಸಿದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm