ಬ್ರೇಕಿಂಗ್ ನ್ಯೂಸ್
17-08-26 10:54 am HK News Staffer ಕ್ರೈಂ
ಬಂಟ್ವಾಳ, ಆ 17: ಹಾಸನ-ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿ 1.05 ಕೋಟಿ ರೂ. ಮೌಲ್ಯದ ಮಾದಕವಸ್ತು, ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಎಂಬಾತ ಬಂಧಿತ ಆರೋಪಿ. ರಾತ್ರಿ ಹೊತ್ತು ಹಾಸನ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸಲಾಗುತ್ತದೆ ಎಂಬ ಖಚಿತ ಮಾಹಿತಿ ಲಭಿಸಿತ್ತು. ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಳಿ ಬಣ್ಣದ ಟೊಯೆಟಾ ಕಾರನ್ನು ತಡೆಹಿಡಿದು ಪರಿಶೀಲನೆ ನಡೆಸಿದಾಗ ಆರೋಪಿಯು ಮಾದಕ ವಸ್ತು ಸಾಗಿಸುತ್ತಿರುವುದು ಪತ್ತೆಯಾಗಿದೆ. ತಪಾಸಣೆ ವೇಳೆ ಎಂಡಿಎಂಎ, ಕೊಕೇನ್ ಪತ್ತೆಯಾಗಿದ್ದು, ಖಾಲಿ ಪ್ಲಾಸ್ಟಿಕ್ ಡಬ್ಬ, ಡಿಜಿಟಲ್ ತೂಕದ ಯಂತ್ರಗಳೂ ಸಿಕ್ಕಿವೆ. ಒಟ್ಟು 538.63 ಗ್ರಾಂ ಎಂಡಿಎಂಎ ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿವೆ. ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಮಾದಕ ವಸ್ತುಗಳ ಅಂದಾಜು ಮೌಲ್ಯವು ಎಂಡಿಎಂಎ 53,86,300 ಹಾಗೂ ಕೊಕೇನ್ 49,56,000 ರೂ. ಆಗಿದ್ದು, ಇತರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸೇರಿದಂತೆ ಒಟ್ಟು ಅಂದಾಜು ಮೌಲ್ಯ 1,05,59,450 ಆಗಿದೆ. ಆರೋಪಿಗೆ ಇರುವ ಸಂಪರ್ಕಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಉಪವಿಭಾಗ ಎಎಸ್ಪಿ ಯಶ ಕುಮಾರ್ ಶರ್ಮಾ ಮಾರ್ಗದರ್ಶನ ಹಾಗೂ ಬಂಟ್ವಾಳ ಪೊಲೀಸ್ ಇನ್ಸ್ಪೆಕ್ಟರ್ ಅನಂತಪದ್ಮನಾಭ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಎಸ್ಐ ಮಂಜುನಾಥ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm