ಬ್ರೇಕಿಂಗ್ ನ್ಯೂಸ್
17-08-26 10:02 pm HK News Staffer ಕ್ರೈಂ
ಕಾರವಾರ , ಆಗಸ್ಟ್ 17: ದಾಂಡೇಲಿ ತಾಲೂಕಿನ ಹಾಸನ್ ಮಾಳ್ ಗ್ರಾಮದ ವೈಲ್ಡರ್ ನೆಸ್ಟ್ ರೆಸಾರ್ಟ್ನಲ್ಲಿ ಸೋಮವಾರ ಮುಂಜಾನೆ ಕಪ್ಪು ಚಿರತೆ ದಾಳಿ ನಡೆಸಿದ್ದು, ರೆಸಾರ್ಟ್ನ ಜರ್ಮನ್ ಶೆಫರ್ಡ್ ತಳಿಯ ನಾಯಿ ಮೃತಪಟ್ಟಿದೆ.
ಮುಂಜಾನೆ ಸುಮಾರು 4 ಗಂಟೆ ವೇಳೆಗೆ ರೆಸಾರ್ಟ್ ಆವರಣದಲ್ಲಿ ಮಲಗಿದ್ದ ಜರ್ಮನ್ ಶೆಫರ್ಡ್ ನಾಯಿಯ ಮೇಲೆ ಕಪ್ಪು ಚಿರತೆ ಏಕಾಏಕಿ ದಾಳಿ ನಡೆಸಿದೆ. ದಾಳಿಯ ತೀವ್ರತೆಗೆ ನಾಯಿ ಸ್ಥಳದಲ್ಲೇ ಮೃತಪಟ್ಟಿದೆ. ಮೃತ ನಾಯಿ ರೆಸಾರ್ಟ್ ಮಾಲೀಕ ಅಬ್ದುಲ್ ಕರೀಂ ಖತೀಬ್ ಅವರಿಗೆ ಸೇರಿದ್ದಾಗಿದೆ ಎಂದು ತಿಳಿದುಬಂದಿದೆ.
CCTVಯಲ್ಲಿ ಭೀಕರ ದೃಶ್ಯ ಸೆರೆ!
ಚಿರತೆ ನಾಯಿಯ ಮೇಲೆ ದಾಳಿ ನಡೆಸಿದ ಸಂಪೂರ್ಣ ದೃಶ್ಯ ರೆಸಾರ್ಟ್ನ CCTV ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮುಂಜಾನೆಯ ವೇಳೆ ರೆಸಾರ್ಟ್ ಆವರಣಕ್ಕೆ ಪ್ರವೇಶಿಸಿದ ಕಪ್ಪು ಚಿರತೆ, ಮಲಗಿದ್ದ ನಾಯಿಯ ಮೇಲೆ ದಾಳಿ ನಡೆಸಿ ಅದನ್ನು ಎಳೆದುಕೊಂಡು ಹೋಗಲು ಯತ್ನಿಸಿರುವ ದೃಶ್ಯ ಕ್ಯಾಮೆರಾದಲ್ಲಿ ದಾಖಲಾಗಿದೆ.
ರೆಸಾರ್ಟ್ ಒಳಗೆ ನುಗ್ಗಿದ ಚಿರತೆ;
ಆತಂಕದಲ್ಲಿ ಸ್ಥಳೀಯರು ಹಾಸನ್ ಮಾಳ್ ಪ್ರದೇಶವು ದಾಂಡೇಲಿ-ಅಣಶಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವುದರಿಂದ ಕಾಡುಪ್ರಾಣಿಗಳ ಓಡಾಟ ಇಲ್ಲಿ ಸಾಮಾನ್ಯವಾಗಿದೆ. ಆದರೆ ಜನವಸತಿ ಪ್ರದೇಶಕ್ಕೆ ಹೊಂದಿಕೊಂಡಿರುವ ರೆಸಾರ್ಟ್ ಆವರಣದೊಳಗೇ ಕಪ್ಪು ಚಿರತೆ ನುಗ್ಗಿ ದಾಳಿ ನಡೆಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಕಳೆದ ಕೆಲವು ದಿನಗಳಿಂದ ಇದೇ ಭಾಗದಲ್ಲಿ ಬ್ಲ್ಯಾಕ್ ಪ್ಯಾಂಥರ್ ಓಡಾಟ ಕಂಡುಬರುತ್ತಿದೆ ಎನ್ನಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
‘ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ’ ಗ್ರಾಮಸ್ಥರ ಆಗ್ರಹ
ಚಿರತೆ ಓಡಾಟ ಮುಂದುವರಿದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ರೆಸಾರ್ಟ್ಗಳು, ಮನೆಗಳು ಹಾಗೂ ಜನವಸತಿ ಪ್ರದೇಶಗಳ ಸುತ್ತಮುತ್ತ ಕಾಡುಪ್ರಾಣಿಗಳ ಚಲನವಲನದ ಬಗ್ಗೆ ನಿಗಾ ವಹಿಸಿ, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
#Karnataka #KaliTigerReserve
— Amit Upadhye (@AmitSUpadhye) August 17, 2026
The ghost from the forests #BlackPanther grabs a dog sleeping a resort near #Dandeli Leaves back its catch after some disturbance #watch @NewIndianXpress @XpressBengaluru @KannadaPrabha @ns_subhash @aranya_kfd pic.twitter.com/C1BpvUx0P9
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm