ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿನಿಂದ ಜೇಜ್ಜಿ ಕೊಂದ ರಾಕ್ಷಸಿ ಮಗಳು, ರಸ್ತೆ ಪಕ್ಕದಲ್ಲಿ ಹೆಣ ಎಸೆದು ಪರಾರಿ, ಗ್ರಹಚಾರ ಬಿಡಿಸಿದ ಖಾಕಿ

18-08-26 10:06 pm       HK News Staffer   ಕ್ರೈಂ

ಆಸ್ತಿ ವಿವಾದ ಹಾಗೂ ವಿವಾಹೇತರ ಸಂಬಂಧ ವಿರೋಧ ವ್ಯಕ್ತಪಡಿಸಿದ ತಂದೆಯನ್ನು ಸ್ವಂತ ಪುತ್ರಿಯೇ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದೆ. ನಿವೃತ್ತ ಶಿಕ್ಷಕರಾಗಿರುವ ಸಿದ್ದಪ್ಪ ಅಂಜುಟಗಿ(62) ಕೊಲೆಯಾದವರು. ಘಟನೆ ಸಂಬಂಧ ಪುತ್ರಿ ಪ್ರಿಯಾಂಕಾ, ಆಕೆಯ ಪ್ರಿಯಕರ ಸಂತೋಷನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಗುರುರಾಜ ಬಿರಾದಾರ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ವಿಜಯಪುರ, ಆ 18: ಆಸ್ತಿ ವಿವಾದ ಹಾಗೂ ವಿವಾಹೇತರ ಸಂಬಂಧ ವಿರೋಧ ವ್ಯಕ್ತಪಡಿಸಿದ ತಂದೆಯನ್ನು ಸ್ವಂತ ಪುತ್ರಿಯೇ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಇಂಡಿ ತಾಲೂಕಿನ ಚೌಡಿಹಾಳ್ ರಸ್ತೆಯ ಪೂಜಾರಿ ವಸ್ತಿ ತೋಟದ ಬಳಿ ನಡೆದಿದೆ. ನಿವೃತ್ತ ಶಿಕ್ಷಕರಾಗಿರುವ ಸಿದ್ದಪ್ಪ ಅಂಜುಟಗಿ(62) ಕೊಲೆಯಾದವರು. ಘಟನೆ ಸಂಬಂಧ ಪುತ್ರಿ ಪ್ರಿಯಾಂಕಾ, ಆಕೆಯ ಪ್ರಿಯಕರ ಸಂತೋಷನನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಆರೋಪಿ ಗುರುರಾಜ ಬಿರಾದಾರ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಚೌಡಿಹಾಳ ರಸ್ತೆಯಲ್ಲಿ ಸಿದ್ದಪ್ಪ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿ ಪರಾರಿಯಾಗಿರಬಹುದು ಎಂದು ಅಂದಾಜಿಸಲಾಗಿತ್ತು. ಮೃತ ಸಿದ್ದಪ್ಪ ಅವರ ಹಿರಿಯ ಪುತ್ರಿ ನಿಖಿತಾ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ಪುತ್ರಿಯೇ ತನ್ನ ಪ್ರಿಯಕರನ ಜೊತೆ ಹತ್ಯೆ ಮಾಡಿರುವ ವಿಷಯ ಬಯಲಾಗಿದೆ. 

ಕಳೆದ ಎರಡು ವರ್ಷಗಳ ‌ಹಿಂದೆ ಸಿದ್ದಪ್ಪ ನಿವೃತ್ತಿಯಾಗಿದ್ದರು. ಈ ವೇಳೆ ಅವರಿಗೆ ನಿವೃತ್ತಿ ಹಣ ಬಂದಿತ್ತು. ಇದರ ಜೊತೆಗೆ ಊರಲ್ಲಿ ಸ್ವಲ್ಪ ಆಸ್ತಿ ಇತ್ತು. ಈ ಆಸ್ತಿ ವಿಚಾರಕ್ಕೆ ತಂದೆ, ಮಗಳ ನಡುವೆ ಗಲಾಟೆ ನಡೆಯುತ್ತಿತ್ತು. ಪ್ರಿಯಾಂಕಾ ಪತಿ ಸುರೇಶ ಮಸಳಿ ಕೊರೊನಾ ಸಾಂಕ್ರಾಮಿಕದ ವೇಳೆ ಮೃತಪಟ್ಟಿದ್ದರು. ಇದರಿಂದ ಕೆಲಕಾಲ ವಿಜಯಪುರದಲ್ಲಿ ವಾಸವಿದ್ದ ಪ್ರಿಯಾಂಕಾಗೆ ಆಟೋ ಚಾಲಕ ಸಂತೋಷ ಸಿಂಧೆ ಜೊತೆಗೆ ಸಂಬಂಧ ಬೆಳೆದಿತ್ತು. ಈ ಅಕ್ರಮ ಸಂಬಂಧಕ್ಕೆ ತಂದೆ ವಿರೋಧ ವ್ಯಕ್ತಪಡಿಸಿ, ಆಸ್ತಿಯಲ್ಲಿ ಪಾಲು ನೀಡೋದಿಲ್ಲ ಎಂದಿದ್ದರು. ಇದು ಪ್ರಿಯಾಂಕಾಳ ಕೋಪಕ್ಕೆ ಕಾರಣವಾಗಿತ್ತು. ಆಸ್ತಿ ವಿಚಾರದಲ್ಲಿ ತಂದೆಯೊಂದಿಗೆ ಆಗಸ್ಟ್ 15 ರಂದು ಪ್ರಿಯಾಂಕಾ ಗಲಾಟೆ ಮಾಡಿದ್ದಾಳೆ. ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ ಪ್ರಿಯಾಂಕಾ ತನ್ನ ಪ್ರಿಯಕರ ಸಂತೋಷನಿಗೆ ಮನೆಗೆ ಬರಲು ಹೇಳಿದ್ದಾಳೆ. ರಾತ್ರಿ ಪ್ರಿಯಾಂಕಾ ಮನೆಗೆ ಹೋದ ಸಂತೋಷ ಹಾಗೂ ಆತನ ಸ್ನೇಹಿತ ಮೊದಲು ಸಿದ್ದಪ್ಪನನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾರೆ. ಬಳಿಕ ದೊಡ್ಡ ಕಲ್ಲಿನಿಂದ ಜಜ್ಜಿದ್ದಾರೆ. ನಂತರ ಮೃತದೇಹವನ್ನು ರಸ್ತೆ ಪಕ್ಕದಲ್ಲಿ ಎಸೆದು ಪರಾರಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.