ಬ್ರೇಕಿಂಗ್ ನ್ಯೂಸ್
20-08-26 04:25 pm HK News Staffer ಕ್ರೈಂ
ಉಳ್ಳಾಲ, ಆ.20: ಉಳ್ಳಾಲ ಕೋಟೆಪುರ ಸಮುದ್ರ ತೀರದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಘಟನೆಗೆ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಮೀನುಗಾರಿಕಾ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದ ಎನ್ನಲಾದ ವ್ಯಕ್ತಿಯನ್ನು ತಲೆಗೆ ಮತ್ತು ಹೊಟ್ಟೆಗೆ ಹರಿತ ಆಯುಧದಿಂದ ಹೊಡೆದು ಕೊಲ್ಲಲಾಗಿದೆ ಎನ್ನುವ ವರದಿ ಮರಣೋತ್ತರ ಪರೀಕ್ಷೆಯಲ್ಲಿ ಬಂದಿದೆ. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ವ್ಯಕ್ತಿಯನ್ನು ಯಾರೋ ಕೊಲೆಗೈದು ಸಮುದ್ರಕ್ಕೆ ಎಸೆದಿರುವ ಶಂಕೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 17ರಂದು ಕೋಟೆಪುರ ಮಸೀದಿ ಹಿಂಭಾಗದ ಕಡಲ ಕಿನಾರೆಯಲ್ಲಿ ವ್ಯಕ್ತಿಯೊಬ್ಬರ ಶವವು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿದ್ದ ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವೆನ್ಲಾಕ್ ಆಸ್ಪತ್ರೆಗೆ ಕಳುಹಿಸಿದ್ದರು. ಈ ನಡುವೆ, ಪಾಂಡೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ನಾಪತ್ತೆ ಪ್ರಕರಣದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಮೀನುಗಾರ ನಾರಾಯಣ ಎಂಬವರ ಸಹೋದರ ಕೃಷ್ಣಪ್ಪ ಅವರನ್ನ ಸ್ಥಳಕ್ಕೆ ಕರೆಸಿದ್ದರು. ಮೃತದೇಹ ತನ್ನ ತಮ್ಮನದ್ದೇ ಎಂದು ಗುರುತಿಸಿದ್ದರಿಂದ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಅವರಿಗೆ ಬಿಟ್ಟು ಕೊಡಲಾಗಿತ್ತು.
ಉಡುಪಿ ಜಿಲ್ಲೆಯ ಕಿರಿಮಂಜೇಶ್ವರ ನಿವಾಸಿ ನಾರಾಯಣ (31) ಎಂಬವರು ಆ.3ರಂದು ಮಂಗಳೂರಿನ ಮೀನುಗಾರರೊಂದಿಗೆ ಬೋಟಿನಲ್ಲಿ ಮೀನುಗಾರಿಕೆಗೆ ತೆರಳಿದ್ದು ಆ.9ರಂದು ವಾಪಾಸು ಬರುತ್ತಿದ್ದಾಗ ನೇತ್ರಾವತಿ ನದಿ ಸೇರುವ ಅಳಿವೆ ಬಾಗಿಲಿನಲ್ಲಿ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿದ್ದರು. ಈ ಬಗ್ಗೆ ಅವರ ಅಣ್ಣ ಕೃಷ್ಣಪ್ಪ ಆ.10ರಂದು ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ಕೇಸು ದಾಖಲಿಸಿದ್ದರು. ಆ.17ರಂದು ಶವ ಪತ್ತೆಯಾದ ಸಂದರ್ಭದಲ್ಲಿ ಅದು ತಮ್ಮ ನಾರಾಯಣ ಅವರದ್ದೇ ಆಗಿರಬಹುದು ಎಂದು ಗುರುತು ಹಿಡಿದರೂ, ಪೊಲೀಸರು ಡಿಎನ್ಎ ಆಗದೆ ಸಾಬೀತು ಮಾಡಲು ಸಾಧ್ಯವಿಲ್ಲ ಎಂದಿದ್ದರು. ಯಾಕಂದ್ರೆ, ದೇಹದಲ್ಲಿ ಗುರುತಿಸುವಂತಹ ಬಟ್ಟೆಯಾಗಲೀ, ಇನ್ನಿತರ ವಸ್ತುವಾಗಲೀ ಇರಲಿಲ್ಲ. ಹೀಗಾಗಿ ಕೊಳೆತ ಸ್ಥಿತಿಯಲ್ಲಿ ದೊರಕಿದ್ದ ಶವ ನಾರಾಯಣ ಅವರದ್ದಾ, ಬೇರೆಯವರದ್ದಾ ಎನ್ನುವುದು ಇನ್ನೂ ದೃಢಪಟ್ಟಿಲ್ಲ.
ಇದೀಗ ಶವ ಮಹಜರು ಮಾಡಿದ ವೈದ್ಯರು ಮೃತದೇಹದ ತಲೆ ಬುರುಡೆಗೆ ಹರಿತ ಆಯುಧ ಮತ್ತು ಸುತ್ತಿಗೆಯಂತಹ ವಸ್ತುಗಳ ಪ್ರಹಾರದಿಂದ ಒಡೆದಿರುವುದು ಮತ್ತು ಹಲವು ರೀತಿಯ ಗಾಯಗಳಾಗಿರುವುದನ್ನು ಪತ್ತೆ ಮಾಡಿದ್ದಾರೆ. ಮುಖದ ಗದ್ದ ಭಾಗ ಮತ್ತು ಹೊಟ್ಟೆಯ ಭಾಗಗಳಲ್ಲೂ ಹರಿತವಾದ ಆಯುಧಗಳಿಂದ ಉಂಟಾದ ಗಾಯಗಳಿರುವುದನ್ನು ದೃಢಪಡಿಸಿದ್ದಾರೆ. ಹೀಗಾಗಿ ಈ ವ್ಯಕ್ತಿಯನ್ನು ಯಾರೋ ಹೊಡೆದು ಕೊಲೆಗೈದು ಸಮುದ್ರಕ್ಕೆ ಎಸೆದಿದ್ದಾರೆಯೇ ಎಂಬ ಶಂಕೆ ವ್ಯಕ್ತವಾಗಿದ್ದು ಉಳ್ಳಾಲ ಪೊಲೀಸರು ಅಸಹಜ ಸಾವು ಪ್ರಕರಣವನ್ನು ಶಂಕಿತ ಕೊಲೆ ಕೇಸಾಗಿ ಪರಿವರ್ತಿಸಿದ್ದಾರೆ.
ಈ ಬಗ್ಗೆ ಉಳ್ಳಾಲ ಠಾಣೆ ಪಿಎಸ್ಐ ರೇವಣಸಿದ್ದಪ್ಪ ಸ್ವತಃ ದೂರು ದಾಖಲಿಸಿಕೊಂಡು ಬಿಎನ್ಎಸ್ 118(2) ಮತ್ತು 103(1) ಅಡಿ ಕೇಸು ದಾಖಲಿಸಿದ್ದಾರೆ. ಅಲ್ಲದೆ, ತನ್ನ ತಮ್ಮನದ್ದೇ ಶವ ಎಂದಿರುವ ಕೃಷ್ಣಪ್ಪ ಅವರ ಸ್ಯಾಂಪಲ್ ಪಡೆದು ಡಿಎನ್ಎ ಪರೀಕ್ಷೆಗೆ ಮುಂದಾಗಿದ್ದಾರೆ. ಅಲ್ಲದೆ, ನಾರಾಯಣ ಅವರನ್ನು ಬೋಟಿನಲ್ಲಿ ಕರೆದೊಯ್ದಿದ್ದ ಇತರ ಸಿಬಂದಿಯನ್ನು ತನಿಖೆಗೆ ಒಳಪಡಿಸಲಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 05:33 pm
HK News Staffer
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm