ಬ್ರೇಕಿಂಗ್ ನ್ಯೂಸ್
20-08-26 05:33 pm HK News Staffer ಕ್ರೈಂ
ಮಂಗಳೂರು, ಆ.20: ಲೈನ್ ಸೇಲ್ ಸಂಗ್ರಹದ ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಹಿಂಬದಿಯಿಂದ ಬೈಕಿನಲ್ಲಿ ಬಂದ ಇಬ್ಬರು ಆಗಂತುಕರು ಡಿಕ್ಕಿ ಹೊಡೆಸಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಎಂಟೂವರೆ ಲಕ್ಷ ರೂ. ದರೋಡೆ ಮಾಡಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆ ವ್ಯಾಪ್ತಿಯ ಮಣಿನಾಲ್ಕೂರು ಎಂಬಲ್ಲಿ ನಡೆದಿದೆ.
ಮಂಗಳೂರಿನ ಪಡೀಲ್ - ಕಣ್ಣೂರಿನಲ್ಲಿರುವ ಸಿಮೆಂಟ್ ಹಾಗೂ ಕಬ್ಬಿಣ ಮಾರಾಟದ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಮಯ್ಯದಿ (40) ಎಂಬವರು, ಸದ್ರಿ ಸಂಸ್ಥೆಯ ವ್ಯವಹಾರದ ಹಣವನ್ನು ವಿವಿಧ ಅಂಗಡಿಗಳಿಂದ ಸಂಗ್ರಹಿಸಿಕೊಂಡು ಬರುತ್ತಿದ್ದಾಗ ಇಂದು ಮಧ್ಯಾಹ್ನ ದರೋಡೆ ನಡೆಸಲಾಗಿದೆ. ಪಡೀಲಿನಲ್ಲಿ ಬೃಹತ್ ಹೋಲ್ ಸೇಲ್ ಅಂಗಡಿಯಿದ್ದು ಜಿಲ್ಲೆಯ ವಿವಿಧ ಕಡೆಗಳಿಗೆ ವಾಹನದಲ್ಲಿ ಸಾಮಗ್ರಿಗಳನ್ನು ಪೂರೈಸಲಾಗುತ್ತದೆ. ಆನಂತರ, ವಾರದ ಬಳಿಕ ಮಯ್ಯದಿ ಹಣದ ಸಂಗ್ರಹಕ್ಕಾಗಿ ಬೈಕಿನಲ್ಲಿ ಬರುತ್ತಿದ್ದರು.
ಗುರುವಾರ ಬೈಕ್ ನಲ್ಲಿ ತೆರಳಿದ್ದು, ಹಲವು ಅಂಗಡಿಗಳಿಂದ ನಗದು ಹಣವನ್ನು ಸಂಗ್ರಹಿಸಿ, ಬಂಟ್ವಾಳ ಕಕ್ಕೆಪದವಿನಿಂದ ಪಾಣೆಮಂಗಳೂರಿಗೆ ಬೈಕ್ ನಲ್ಲಿ ಬರುತ್ತಿದ್ದರು. ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಂಟ್ವಾಳ ಮಣಿನಾಲ್ಕೂರು ಮುಲ್ಕಾಜೆ ಮಾಡ ಎಂಬಲ್ಲಿ ತಲುಪಿದಾಗ, ಎರಡು ಬೈಕ್ ನಲ್ಲಿ ಬಂದ ನಾಲ್ಕು ಜನ ಅಪರಿಚಿತರು, ಮಯ್ಯದಿ ಅವರಿಗೆ ತಲವಾರು ತೋರಿಸಿ, ಬೆದರಿಸಿ ಅವರ ಬಳಿಯಿದ್ದ 8,52,000 ರೂ. ನಗದು ಹಣವನ್ನು ಸುಲಿಗೆ ನಡೆಸಿ ಪರಾರಿಯಾಗಿದ್ದಾರೆ.



ನಗದು ರೂಪದ ಹಣವಲ್ಲದೆ, ಕೆಲವು ಕಡೆ ಚೆಕ್, ಡಿಡಿಗಳನ್ನು ನೀಡುತ್ತಾರೆ. ಎಲ್ಲವನ್ನೂ ಬ್ಯಾಗಿನಲ್ಲಿ ಕಟ್ಟಿಕೊಂಡು ಬರುವುದು ರೂಢಿಯಾಗಿತ್ತು. ಮಯ್ಯದಿ ಇಂದು ಮಧ್ಯಾಹ್ನ ಮಣಿ ನಾಲ್ಕೂರು ಗ್ರಾಮದಿಂದ ಮಣಿಹಳ್ಳಕ್ಕೆ ಬರುವ ನಿರ್ಜನ ಪ್ರದೇಶದಲ್ಲಿ ಬೈಕಿನಲ್ಲಿ ಬಂದವರು ಹಿಂದಿನಿಂದ ಡಿಕ್ಕಿ ಹೊಡೆಸಿದ್ದಾರೆ. ಈ ವೇಳೆ, ಮತ್ತೊಂದು ಬೈಕಿನಲ್ಲಿದ್ದವರು ಮಯ್ಯದಿ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕೈಯಲ್ಲಿದ್ದ ಹಣದ ಚೀಲವನ್ನು ಎಗರಿಸಿ ಪರಾರಿಯಾಗಿದ್ದಾರೆ. ನಗದು ಹಣವಲ್ಲದೆ, ಎಷ್ಟು ಮೊತ್ತದ ಚೆಕ್, ಡಿಡಿಗಳಿದ್ದವು ಎಂಬ ಬಗ್ಗೆ ಮಾಹಿತಿ ಗೊತ್ತಾಗಿಲ್ಲ. ಹಣ ಹಿಡಿದುಕೊಂಡು ಬರುತ್ತಿದ್ದ ಇವರ ಬಗ್ಗೆ ತಿಳಿದವರೇ ಕೃತ್ಯ ಎಸಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 05:33 pm
HK News Staffer
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm