ಬ್ರೇಕಿಂಗ್ ನ್ಯೂಸ್
20-08-26 08:06 pm HK News Staffer ಕ್ರೈಂ
ಉಳ್ಳಾಲ, ಆ.20: ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಕಚೇರಿಯ ಅಂಗಣದಲ್ಲಿರುವ ಶ್ರೀ ಮಹಾಲಕ್ಷ್ಮಿ ಗಣಪತಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಿಯ ವಿಗ್ರಹದ ಬೆಲೆ ಬಾಳುವ ಚಿನ್ನಾಭರಣ, ಬೆಳ್ಳಿ ಪ್ರಭಾವಳಿಗಳನ್ನ ದೋಚಿರುವ ಘಟನೆ ಬುಧವಾರ ತಡರಾತ್ರಿ ಕಲ್ಲಾಪುವಿನ ಬೊಡಂಗಿಲ ಎಂಬಲ್ಲಿ ನಡೆದಿದೆ.
ಕಲ್ಲಾಪು ಬೊಡಂಗಿಲದಲ್ಲಿರುವ ಎಸಿಪಿಯವರ ಕಚೇರಿ ಕಟ್ಟಡದ ಅಂಗಣದಲ್ಲೇ ಇರುವ ದೇವಸ್ಥಾನದಲ್ಲಿ ಚಿನ್ನಾಭರಣ ಕಳವಾಗಿರುವುದು ವಿಪರ್ಯಾಸ. ಬುಧವಾರ ತಡರಾತ್ರಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು ಮಹಾಲಕ್ಷ್ಮಿ ವಿಗ್ರಹದ ಕತ್ತಲ್ಲಿದ್ದ ಚಿನ್ನದ ಕರಿಮಣಿ, ಚಿನ್ನದ ಸರ, ಪೆಂಡೆಂಟ್, ತಾಳಿ ಮತ್ತು ವಿಗ್ರಹದ ಬೆಳ್ಳಿ ಕವಚ ಸೇರಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತನ್ನು ದೋಚಿದ್ದಾರೆ.
ಗರ್ಭಗುಡಿಯೊಳಗಿದ್ದ ಪಂಚಲೋಹದ ಪ್ರಭಾವಳಿ ಹಾಗೂ ಕೊಡವನ್ನ ಕಳ್ಳರು ಅಲ್ಲೇ ಬಿಟ್ಟು ಹೋಗಿದ್ದಾರೆ. ಬುಧವಾರ ರಾತ್ರಿ ಒಂದು ಗಂಟೆಯವರೆಗೆ ಎಸಿಪಿ ಕಚೇರಿಯಲ್ಲಿ ಸಿಬ್ಬಂದಿಗಳಿದ್ದರೆಂದು ಹೇಳಲಾಗಿದೆ. ಗುರುವಾರ ಮುಂಜಾನೆ 4.30 ಗಂಟೆಗೆ ಪ್ರಧಾನ ಅರ್ಚಕರಾದ ಬಾಲಕೃಷ್ಣ ಭಟ್ ಅವರು ಕ್ಷೇತ್ರಕ್ಕೆ ಪೂಜೆಯ ತಯಾರಿಗೆ ಬಂದಾಗ ಗರ್ಭಗುಡಿಯ ಬೀಗ ಒಡೆದಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.





ಕಳವು ನಡೆದಿರುವ ಮಹಾಲಕ್ಷ್ಮಿ ಕ್ಷೇತ್ರ ಹಾಗೂ ಎಸಿಪಿ ಕಚೇರಿಯಲ್ಲಿ ಸಿಸಿ ಕ್ಯಾಮೆರಾಗಳೇ ಇಲ್ಲದ ಕಾರಣ ಕಳ್ಳರ ಜಾಡು ಹಿಡಿಯುವುದು ಪೊಲೀಸರಿಗೆ ಕಗ್ಗಂಟಾಗಿದೆ. ಊರವರಲ್ಲದೆ ಎಸಿಪಿ ಕಚೇರಿಯ ಪೊಲೀಸ್ ಸಿಬ್ಬಂದಿಗಳು ಕೂಡಾ ತಮ್ಮ ಅಂಗಣದಲ್ಲಿರುವ ಮಹಾಲಕ್ಷ್ಮಿಯನ್ನ ಶ್ರಧ್ಧೆಯಿಂದ ಆರಾಧಿಸುತ್ತ ಬಂದಿದ್ದರು. ಪೊಲೀಸರು ಭಕ್ತಿ ಪೂರ್ವಕವಾಗಿ ದೇವಿಗೆ ಪಂಚಲೋಹದ ಪ್ರಭಾವಳಿ ಹಾಗೂ ಚಿನ್ನದ ಆಭರಣಗಳನ್ನೂ ಕೊಡುಗೆಯಾಗಿ ನೀಡಿದ್ದರು. ಆದರೆ ತಮ್ಮ ಕಚೇರಿ ಅಂಗಣದಲ್ಲೇ ನಡೆದಿರುವ ಕಳ್ಳತನ ಪ್ರಕರಣವು ಎಸಿಪಿ ಕಚೇರಿ ಸಿಬ್ಬಂದಿಯನ್ನೇ ಅಣಕಿಸಿದಂತಿದೆ.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm