ಬ್ರೇಕಿಂಗ್ ನ್ಯೂಸ್
24-08-26 02:25 pm HK News Staffer ಕ್ರೈಂ
ಕಾಸರಗೋಡು, ಆ.24: ಕುಂಬಳೆಯ ಮುಸ್ಲಿಂ ವ್ಯಾಪಾರಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ವೀಡಿಯೊ ಮಾಡಿ ಜಾಲತಾಣಗಳಲ್ಲಿ ಹರಿಯಬಿಡುವುದಾಗಿ ಬೆದರಿಸಿ ಹಣ ವಸೂಲಿ ಮಾಡುತ್ತಿದ್ದ ಆರೋಪದಲ್ಲಿ ದಂಪತಿ ಸೇರಿದಂತೆ ಮೂವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಕುಬಣೂರು ನಿವಾಸಿ ರಿಜ್ವಾನ, ಆಕೆಯ ಪತಿ ಹಸನ್ ಆಸಿಫ್ ಹಾಗೂ ಇವರ ಸಂಬಂಧಿ ಸಿರಾಜ್ ಬಂಧಿತ ಆರೋಪಿಗಳು. 64 ವರ್ಷದ ವ್ಯಾಪಾರಿಯನ್ನು ಹನಿಟ್ರ್ಯಾಪ್ಗೆ ಸಿಲುಕಿಸಿ ಹಣ ವಸೂಲಿ ಮಾಡಲಾಗುತ್ತಿತ್ತು. ಆರೋಪಿಗಳು ದೊಡ್ಡ ಮೊತ್ತಕ್ಕೆ ಬೇಡಿಕೆ ಇಟ್ಟು ಬ್ಲ್ಯಾಕ್ಮೇಲ್ ಮಾಡಿದ ಹಿನ್ನೆಲೆಯಲ್ಲಿ ಸಂತ್ರಸ್ತ ವ್ಯಕ್ತಿ ಕುಂಬಳೆ ಪೊಲೀಸರಿಗೆ ದೂರು ನೀಡಿದ್ದರು.
ಇದೇ ಆಗಸ್ಟ್ 16ರಂದು ತನ್ನ 5,000 ರೂ. ಸಾಲ ಮರಳಿಸುವುದಾಗಿ ನಂಬಿಸಿದ ರಿಜ್ವಾನ, ವ್ಯಾಪಾರಿಯನ್ನು ತನ್ನ ಮನೆಗೆ ಕರೆಸಿಕೊಂಡಿದ್ದಳು. ಬಳಿಕ ಆತನನ್ನು ಬೆಡ್ರೂಮ್ಗೆ ಕರೆದೊಯ್ದಿದ್ದು ಈ ವೇಳೆ ಅವಿತುಕೊಂಡಿದ್ದ ಉಳಿದ ಆರೋಪಿಗಳು ಫೋಟೋ ಮತ್ತು ವೀಡಿಯೊಗಳನ್ನು ತೆಗೆದಿದ್ದು ಹಲ್ಲೆಗೈದು ಕಿರುಕುಳ ನೀಡಿದ್ದರು.
ನಂತರ, ವಿಡಿಯೋ ದೃಶ್ಯಗಳನ್ನು ಹರಿಯ ಬಿಡುವುದಾಗಿ ಬೆದರಿಸಿ ವ್ಯಾಪಾರಿಯಿಂದ ಹಣ, ಎಟಿಎಂ ಕಾರ್ಡ್ ಹಾಗೂ ಮೊಬೈಲ್ ಫೋನ್ಗಳನ್ನು ಕಸಿದುಕೊಂಡಿದ್ದಾರೆ. ಆರಂಭದಲ್ಲಿ 1,500 ರೂ. ನಗದು, ಒಂದು ಮೊಬೈಲ್ ಹಾಗೂ ಕಾರಿನ ಕೀಲಿಯನ್ನು ಕಿತ್ತುಕೊಂಡ ಆರೋಪಿಗಳು, ಬಳಿಕ ಕಾರಿನಲ್ಲಿದ್ದ 25,000 ರೂ. ಮೌಲ್ಯದ ಮತ್ತೊಂದು ಮೊಬೈಲ್ ಮತ್ತು ಎರಡು ಎಟಿಎಂ ಕಾರ್ಡ್ಗಳನ್ನು ದೋಚಿದ್ದಾರೆ.
ಇದಲ್ಲದೆ, ಕೊಲ್ಲುವುದಾಗಿ ಬೆದರಿಸಿ ಎಟಿಎಂ ಪಿನ್ ನಂಬರ್ ಪಡೆದು ಬ್ಯಾಂಕ್ ಖಾತೆಯಿಂದ 7,200 ರೂ. ಡ್ರಾ ಮಾಡಿದ್ದಾರೆ. ಆಗಸ್ಟ್ 17ರಂದು ವ್ಯಾಪಾರಿಯ ಅಂಗಡಿಗೆ ನೇರವಾಗಿ ತೆರಳಿ ಮತ್ತೆ 5,000 ರೂ. ಕೊಡುವಂತೆ ಕೇಳಿ ವಸೂಲಿ ಮಾಡಿದ್ದಾರೆ. ಇದರ ಬಳಿಕ 2 ಲಕ್ಷ ರೂ. ನೀಡುವಂತೆ ಆರೋಪಿಗಳು ಪಟ್ಟು ಹಿಡಿದಿದ್ದರು. ಇದರಿಂದಾಗಿ ಮಾನಸಿಕ ಹಿಂಸೆಗೀಡಾಗಿ ವ್ಯಾಪಾರಿ ನೇರವಾಗಿ ಕುಂಬಳೆ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದು, ಪ್ರಕರಣ ದಾಖಲಿಸಿದ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am