ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm