ಬ್ರೇಕಿಂಗ್ ನ್ಯೂಸ್
09-01-21 12:03 pm Headline Karnataka News Network ಕ್ರೈಂ
ಮುಂಬೈ, ಜ.9 : ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್ಎನ್ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಆಸ್ಪತ್ರೆಯಲ್ಲಿ ಇದ್ದ ಅಗ್ನಿ ಶಾಮಕ ಸಾಧನಗಳನ್ನು ಬಳಸಿಕೊಂಡು ಸಿಬ್ಬಂದಿ ಬೆಂಕಿ ಆರಿಸಲು ಪ್ರಯತ್ನಿಸಿದರು. ಇಡೀ ಆಸ್ಪತ್ರೆ ತುಂಬ ಹೊಗೆ ಆವರಿಸಿತ್ತು. ಈ ದುರಂತದ ಬಗ್ಗೆ ಆಸ್ಪತ್ರೆ ಸಿಬ್ಬಂದಿ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ರಕ್ಷಿಸಲಾದ ಮಕ್ಕಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ.
ಇದಲ್ಲದೆ ಸಮೀಪದ ಐಸಿಯು ವಾರ್ಡ್, ಡಯಾಲಿಸಿಸ್ ವಾರ್ಡ್ ಮತ್ತು ಹೆರಿಗೆ ವಾರ್ಡ್ಗಳಲ್ಲಿದ್ದ ರೋಗಿಗಳನ್ನು ಕೂಡ ಸುರಕ್ಷತೆಗಾಗಿ ಆಸ್ಪತ್ರೆಯ ಬೇರೆ ವಾರ್ಡ್ಗಳಿಗೆ ಕೂಡಲೇ ಸ್ಥಳಾಂತರಿಸಲಾಯಿತು. ಶಾರ್ಟ್ ಸರ್ಕ್ಯೂಟ್ ಈ ಅವಘಡಕ್ಕೆ ಕಾರಣ ಎನ್ನಲಾಗಿದ್ದರೂ, ಅದರ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಘಟಕದಲ್ಲಿದ್ದ ಎಲ್ಲ ಮಕ್ಕಳೂ ಒಂದು ತಿಂಗಳಿನಿಂದ ಮೂರು ತಿಂಗಳ ವಯಸ್ಸಿನವರಾಗಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಅಲ್ಲಿಗೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ರಾಜಧಾನಿ ಮುಂಬೈನಿಂದ ಭಂಡಾರಾ ಸುಮಾರು 900 ಕಿಮೀ ದೂರದಲ್ಲಿದೆ.
ಈ ಘಟನೆ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಆರೋಗ್ಯ ಸಚಿವ ರಾಜೇಶ್ ತೋಪ್, ಭಂಡಾರಾ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿ ಜತೆಗೆ ಮಾತನಾಡಿದ್ದು, ತನಿಖೆಗೆ ಆದೇಶ ನೀಡಿದ್ದಾರೆ.
Ten newborn babies on Saturday died in a fire at the Sick Newborn Care Unit (SNCU) at Bhandara District General Hospital in Maharashtra.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm