ಬ್ರೇಕಿಂಗ್ ನ್ಯೂಸ್
31-08-26 12:01 pm HK News Staffer ಕ್ರೈಂ
ಮಂಗಳೂರು, ಆ.31: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚಾರಕ್ಕೆ ಜಗಳ ನಡೆದು ತಮ್ಮನೇ ಅಣ್ಣನನ್ನು ಚೂರಿಯಿಂದ ಎದೆಗೆ ಇರಿದು ಕೊಂದ ಘಟನೆ ನಗರದ ಕೊಟ್ಟಾರ ಬಳಿಯಲ್ಲಿ ನಡೆದಿದೆ. ಕೊಟ್ಟಾರ ಕ್ರಾಸ್ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಬೆಳಗಾವಿ ಮೂಲದ ಅಡಿವೆಪ್ಪ ಕುಂಬಾರ (43) ಮೃತ ವ್ಯಕ್ತಿ.
ಬೆಳಗಾವಿ ಬೈಲಹೊಂಗಲ ತಾಲೂಕಿನವರಾದ ಈರವ್ವ ಮತ್ತು ಅವರ ಇಬ್ಬರು ಪುತ್ರರು ಹಾಗೂ ಕುಟುಂಬ ಸದಸ್ಯರು ಮಂಗಳೂರಿನಲ್ಲಿ ನೆಲೆಸಿದ್ದು ಈರವ್ವ ಕೊಟ್ಟಾರ ಬಳಿಯಲ್ಲಿ ಗೂಡಂಗಡಿ ನಡೆಸುತ್ತಿದ್ದಾರೆ. ಇವರ ಪುತ್ರರಾದ ಅಡಿವೆಪ್ಪ ಮತ್ತು ರಾಜು ವಿಪರೀತ ಕುಡಿತದ ಚಟ ಹೊಂದಿದ್ದು ಕೂಲಿ ಕೆಲಸ ಮಾಡಿಕೊಂಡಿದ್ದಾರೆ.
ಆ.30ರ ನಿನ್ನೆ ಸಂಜೆ ತಮ್ಮ ರಾಜು ಬಳಿಯಿದ್ದ ಮೊಬೈಲನ್ನು ಅಣ್ಣ ಕಿತ್ತುಕೊಂಡಿದ್ದು ಇದರ ಬಗ್ಗೆ ಗೂಡಂಗಡಿ ಎದುರಲ್ಲಿ ಜಗಳವಾಗಿತ್ತು. ಬಳಿಕ ತಾಯಿಯೇ ಜಗಳ ಬಿಡಿಸಿ ಮೊಬೈಲ್ ನ್ನು ರಾಜುಗೆ ಕೊಡಿಸಿದ್ದರು. ಇಬ್ಬರಿಗೂ ಮದುವೆಯಾಗಿದ್ದರೂ ಕುಡಿತದ ಕಾರಣ ಪತ್ನಿಯರು ಇವರೊಂದಿಗೆ ಇರದೆ ಕಾವೂರಿನಲ್ಲಿ ಬೇರೆ ಮನೆ ಮಾಡಿಕೊಂಡಿದ್ದರು. ಹೀಗಾಗಿ ನಿನ್ನೆ ರಾತ್ರಿ ತಾಯಿ ಅಂಗಡಿಯಲ್ಲಿರುವಾಗ ಇಬ್ಬರು ಪುತ್ರರು ಮನೆಗೆ ಹೋಗಿ ಜಗಳ ಮಾಡಿದ್ದು ಈ ವೇಳೆ ರಾಜು ಚೂರಿಯಿಂದ ಅಣ್ಣನ ಎದೆಗೆ ಇರಿದಿದ್ದಾನೆ. ರಾತ್ರಿ 10.30ರ ಸುಮಾರಿಗೆ ಪಕ್ಕದ ಮನೆಯ ಪ್ರೀತಮ್ ಎನ್ನುವಾತ ಬಂದು ನೋಡಿದಾಗ, ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ತಾಯಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಉರ್ವಾ ಪೊಲೀಸರಿಗೆ ತಿಳಿಸಿದ್ದು ತೀವ್ರ ರಕ್ತಸ್ರಾವದಿಂದ ನೆಲಕ್ಕೊರಗಿದ್ದ ಅಡಿವೆಪ್ಪನನ್ನು ವೆನ್ಲಾಕ್ ಜಿಲ್ಲಾಸ್ಪತ್ರೆಗೆ ಕರೆದೊಯ್ದ ವೇಳೆ ಆತ ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ.
ಉರ್ವಾ ಠಾಣೆ ಪೊಲೀಸರು ಆರೋಪಿ ರಾಜುವನ್ನು ಬಂಧಿಸಿದ್ದು ಘಟನೆ ಬಗ್ಗೆ ತಾಯಿ ಈರವ್ವ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.
31-08-26 08:29 pm
HK News Staffer
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
ಬಿಜೆಪಿ ಸಂಸದೀಯ ಮಂಡಳಿ ಸಭೆಯಿಂದ ಯಡಿಯೂರಪ್ಪ ಹೊರಕ್ಕೆ...
29-08-26 10:49 pm
31-08-26 01:28 pm
HK News Staffer
Mohan Bhagwat: ಹಿಂದೂ ರಾಷ್ಟ್ರದ ಪರಿಕಲ್ಪನೆ ಮುಸ್ಲ...
30-08-26 02:41 pm
ನೇಪಾಳದಲ್ಲಿ ಪ್ರಕೃತಿಯ ರೌದ್ರಾವತಾರ ; ಪ್ರವಾಹಕ್ಕೆ 6...
29-08-26 10:25 pm
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
31-08-26 11:04 pm
HK News Staffer
ಸೆ.18ರಂದು ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಕರಾವಳ...
31-08-26 07:12 pm
ಪ್ರಿಯಾಂಕ್ ಖರ್ಗೆ ಮೇಲೆ 9 ಕೇಸ್ ಇದೆ, ಅವರ ಮೇಲೆ ರೌಡ...
31-08-26 06:07 pm
ಮಂಗಳೂರಿನಲ್ಲಿ ಆಟೋ ದರ ಪರಿಷ್ಕರಣೆ ; ಕನಿಷ್ಠ ದರ 40...
31-08-26 05:09 pm
ಮಧ್ಯರಾತ್ರಿ ಅಪಾರ್ಟ್ಮೆಂಟ್ ಲಿಫ್ಟ್ನಲ್ಲಿ ಸಿಲುಕಿದ...
31-08-26 04:19 pm
31-08-26 09:50 pm
HK News Staffer
ಮೃತ ಗಂಡನ ಪಿಂಚಣಿ ನೀಡದೆ ನಿರ್ಲಕ್ಷ್ಯ ; ಮಂಗಳೂರಿನ ಕ...
31-08-26 07:10 pm
ದೆಹಲಿಯಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ; ಡ್ರಾಪ್ ನೀ...
31-08-26 03:48 pm
ಮಂಗಳೂರಿನ ‘ಸುರಕ್ಷಾ’ ಆಂಬುಲೆನ್ಸ್ ಚಾಲಕ ಕುಡಿದು ಫುಲ...
31-08-26 01:49 pm
Mangalore Murder: ಕುಡಿದ ಮತ್ತಿನಲ್ಲಿ ಮೊಬೈಲ್ ವಿಚ...
31-08-26 12:01 pm