ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm