ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm