ಬ್ರೇಕಿಂಗ್ ನ್ಯೂಸ್
09-01-21 01:31 pm Headline Karnataka News Network ಕ್ರೈಂ
ರಾಂಚಿ, ಜ.9: ಉತ್ತರ ಪ್ರದೇಶದಲ್ಲಿ 50 ವರ್ಷದ ಅಂಗನವಾಡಿ ಕಾರ್ಯಕರ್ತೆಯನ್ನು ಸಾಮೂಹಿಕ ಅತ್ಯಾಚಾರಗೈದು ಬರ್ಬರ ಹತ್ಯೆ ನಡೆಸಿದ ಪ್ರಕರಣದ ಬೆನ್ನಲ್ಲೇ ಜಾರ್ಖಂಡ್ ನಲ್ಲೂ ಅಂಥದ್ದೇ ರೀತಿಯ ಘಟನೆ ಬೆಳಕಿಗೆ ಬಂದಿದೆ.
50 ವರ್ಷದ ವಿಧವೆ ಮಹಿಳೆಯ ಮನೆಗೆ ನುಗ್ಗಿ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಗುಪ್ತಾಂಗಕ್ಕೆ ಸ್ಟೀಲ್ ಲೋಟ ತುರುಕಿ ಭೀಕರವಾಗಿ ಹಲ್ಲೆ ನಡೆಸಿದ್ದಾರೆ. ಜಾರ್ಖಂಡ್ ರಾಜ್ಯದ ಛಾತ್ರ ಜಿಲ್ಲೆಯ ಕೋಬ್ನಾ ಗ್ರಾಮದಲ್ಲಿ ಘಟನೆ ನಡೆದಿದೆ. ಘಟನೆ ಸಂಬಂಧ ಹಂಟರ್ ಗಂಜ್ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಹಳೆ ಜಗಳವನ್ನೇ ಮುಂದಿಟ್ಟು ಮಹಿಳೆಯ ಜೊತೆ ಗುರುವಾರ ರಾತ್ರಿ ಜಗಳ ತೆಗೆದಿದ್ದ ಮೂವರು, ಮಾತಿಗೆ ಮಾತು ಬೆಳೆದು ಆಕೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಡಿಐಜಿ ಅಮೋಲ್ ಹೋಂಕಾರ್ ತಿಳಿಸಿದ್ದಾರೆ.
ಈ ಹಿಂದೆ ಮೇಕೆ ವಿಷಯಕ್ಕೆ ಜಗಳವಾಗಿತ್ತು. ನನ್ನ ಮನೆ ಸಮೀಪ ಗುರುವಾರ ರಾತ್ರಿ ಜಮೀನಿಗೆ ತೆರಳಿದ್ದ ಸಂದರ್ಭ ಮತ್ತೆ ಜಗಳಕ್ಕೆ ಬಂದಿದ್ದಾರೆ. ಮೂವರು ಸೇರಿ ಅತ್ಯಾಚಾರ ನಡೆಸಿದ್ದು ಗುಪ್ತಾಂಗಕ್ಕೆ ಲೋಟ ತುರುಕಿ ಹಿಂಸೆ ನೀಡಿದ್ದಾರೆ ಎಂದು ಮಹಿಳೆ ಆಸ್ಪತ್ರೆಯಲ್ಲಿ ಹೇಳಿಕೆ ನೀಡಿದ್ದಾರೆ.
ವಿಧವೆ ಮಹಿಳೆ ಒಬ್ಬಂಟಿಯಾಗಿ ವಾಸವಿದ್ದು ಆಕೆಯ ಮನೆಯಲ್ಲೇ ಕೃತ್ಯ ನಡೆಸಿದ್ದಾರೆ. ಆಕೆಯನ್ನು ಬಳಿಕ ನೆರೆಹೊರೆಯವರು ಸೇರಿ ಆಸ್ಪತ್ರೆಗೆ ದಾಖಲಿಸಿದ್ದು, ಮಹಿಳೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.
ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ವಾರದ ಹಿಂದೆ ನಡೆದಿದ್ದು 50 ವರ್ಷದ ಅಂಗನವಾಡಿ ಕಾರ್ಯಕರ್ತೆ ದೇವಸ್ಥಾನಕ್ಕೆ ತೆರಳಿದ್ದ ವೇಳೆ ಅರ್ಚಕ ಸೇರಿ ನಾಲ್ವರು ಅತ್ಯಾಚಾರಗೈದು ಗುಪ್ತಾಂಗಕ್ಕೆ ರಾಡ್ ಹಾಕಿ ಕೊಲೆಗೈದಿದ್ದರು.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm