ಬ್ರೇಕಿಂಗ್ ನ್ಯೂಸ್
05-09-26 03:08 pm HK News Staffer ಕ್ರೈಂ
ಬೆಂಗಳೂರು, ಸೆ 05:ಹಣಕಾಸಿನ ವಿವಾದಕ್ಕೆ ಸಂಬಂಧಿಸಿದಂತೆ 30 ವರ್ಷದ ಮಹಿಳೆಯನ್ನು ಅಪಹರಿಸಿ ಎರಡು ದಿನಗಳ ಕಾಲ ಬಂಧನದಲ್ಲಿರಿಸಿ, ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಆರೋಪಿಗಳನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಜ್ರತ್ ಬೇಗಂ, ರೇಷ್ಮಾ ಭಾನು ಮತ್ತು ಸುಹೇಲ್ ಬಂಧಿತ ಆರೋಪಿಗಳು.
ಆರೋಪಿ ನಜ್ರತ್ ಬೇಗಂ ಬಳಿ ಸಂತ್ರಸ್ತ ಮಹಿಳೆ 50 ಸಾವಿರ ಹಾಗೂ ರೇಷ್ಮಾ ಬಳಿ 1 ಲಕ್ಷ ಸಾಲ ಪಡೆದಿದ್ದರು. ವಾರಕ್ಕೊಮ್ಮೆ ಬಡ್ಡಿ ಪಾವತಿಸುತ್ತಿದ್ದ ಸಂತ್ರಸ್ತೆಗೆ ಕಳೆದ ಕೆಲವು ವಾರಗಳಿಂದ ಬಡ್ಡಿ ಪಾವತಿಸಲು ಸಾಧ್ಯವಾಗಿರಲಿಲ್ಲ. ಇದರಿಂದ ಕೋಪಗೊಂಡ ಆರೋಪಿಗಳು ಆಗಸ್ಟ್ 27ರಂದು ಆಕೆಯನ್ನು ಮನೆಗೆ ಕರೆಸಿಕೊಂಡಿದ್ದಾರೆ. ಬಳಿಕ ನಜ್ರತ್ ತನ್ನ ಮಗನೊಂದಿಗೆ ಸಂತ್ರಸ್ತೆಯನ್ನು ಬಲವಂತವಾಗಿ ಆಟೋದಲ್ಲಿ ಕೂರಿಸಿಕೊಂಡು ಕುಂಬಳಗೋಡಿನಲ್ಲಿರುವ ರೇಷ್ಮಾ ಮನೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆರೋಪಿಗಳು ಮಹಿಳೆಯ ಮೇಲೆ ಮರದ ಕೋಲಿನಿಂದ ತೀವ್ರವಾಗಿ ಹಲ್ಲೆ ನಡೆಸಿ, ಕೊಠಡಿಯಲ್ಲಿ ಬಂಧಿಸಿಟ್ಟಿದ್ದಾರೆ.
ಅಷ್ಟೇ ಅಲ್ಲದೆ ಆರೋಪಿ ನಜ್ರತ್, ಸಂತ್ರಸ್ತ ಮಹಿಳೆಯನ್ನು ಬೆತ್ತಲೆಗೊಳಿಸಿ ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿ, ಹಣ ನೀಡದಿದ್ದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಆ ಬಳಿಕ ವಕೀಲರ ಬಳಿ ಕರೆದೊಯ್ದು ಕೆಲವು ದಾಖಲೆಗಳಿಗೆ ಬಲವಂತವಾಗಿ ಸಹಿ ಮಾಡಿಸಿಕೊಳ್ಳಲಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಆಗಸ್ಟ್ 31ರಂದು ಸಂತ್ರಸ್ತ ಮಹಿಳೆ ಶೌಚಾಲಯ ಬಳಸಲು ತೆರಳಿದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಅಷ್ಟರಲ್ಲಿ ಸುಳಿವು ಪಡೆದು ಸ್ಥಳಕ್ಕೆ ಬಂದ ಪೊಲೀಸರು ಆಕೆಯನ್ನು ರಕ್ಷಿಸಿದ್ದಾರೆ. ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಇಬ್ಬರು ಆರೋಪಿಗಳು ಮತ್ತು ಸಂತ್ರಸ್ತೆ ಸ್ನೇಹಿತರಾಗಿದ್ದು, ಹಣಕಾಸಿನ ವೈಷಮ್ಯದಿಂದ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 11:59 am
HK News Staffer
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
05-09-26 03:08 pm
HK News Staffer
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಜೈಲು ವಾರ್ಡನ್ ಕತ...
04-09-26 08:16 pm