ಬ್ರೇಕಿಂಗ್ ನ್ಯೂಸ್
05-09-26 04:55 pm HK News Staffer ಕ್ರೈಂ
ಶಿವಮೊಗ್ಗ, ಸೆ.5 : ಜಿಂಕೆ ಬೇಟೆಯಾಡಿ, ಮಾಂಸ ಮಾರಾಟಕ್ಕಾಗಿ ಕಾರಿನಲ್ಲಿ ಸಾಗಿಸುತ್ತಿದ್ದಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿ, 21 ಕೆ.ಜಿ ಜಿಂಕೆ ಮಾಂಸ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಹೊಸನಗರ ತಾಲೂಕು ರಿಪ್ಪನ್ಪೇಟೆ ಗ್ರಾಮದಲ್ಲಿ ಅಕ್ರಮವಾಗಿ ಜಿಂಕೆ ಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿ ಪೊಲೀಸರು ದಾಳಿ ನಡೆಸಿದ್ದಾರೆ. ರಿಪ್ಪನ್ಪೇಟೆಯ ಶಬರೀಶ ನಗರದಲ್ಲಿ ಜಿಂಕೆ ಮಾಂಸ ಮಾರಾಟ ಮಾಡುವಾಗ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಎರ್ಟಿಗಾ ಕಾರು, ಅದರಲ್ಲಿದ್ದ 21 ಕೆ.ಜಿ ಜಿಂಕೆ ಮಾಂಸವನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಡಿಕೇರಿಯ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್ ಬಿಜ್ಜೂರ್ ಮಾರ್ಗದರ್ಶನದಲ್ಲಿ ಸಾಗರದ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ ಹಾಗೂ ಸಿಬ್ಬಂದಿ ಗಣೇಶ್ ಬಿ.ಸಿ., ಆಂಜನೇಯ ಪಾಟೀಲ್, ಚಂದ್ರಕಾಂತ್, ಸುರೇಶ್, ಪ್ರಮೋದಿನಿ ಹಾಗೂ ಹೆಚ್.ಬಿ. ದೊಡ್ಡಮನಿ ಹಾಜರಿದ್ದರು.
ಜಿಂಕೆ ಮಾಂಸವನ್ನು ಕಾರಿನಲ್ಲಿ ಮಾರಾಟ ಮಾಡುತ್ತಿದ್ದ ರಿಪ್ಪನ್ಪೇಟೆಯ ಶಬರೀಶ ನಗರ ನಿವಾಸಿ ಗುರುರಾಜ್, ಕಾರಗೋಡು ನಿವಾಸಿ ಗಣೇಶ್ ಕೆ.ಜಿ. ಇಬ್ಬರೂ ಪರಾರಿಯಾಗಿದ್ದಾರೆ. ಸದರಿ ಆರೋಪಿಗಳ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲು ಮಾಡಲಾಗಿದೆ ಪೊಲೀಸರು ತಿಳಿಸಿದ್ದಾರೆ.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
05-09-26 04:58 pm
HK News Staffer
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
ಕೆಆರ್ ಐಡಿಎಲ್ ಕಮಿಷನ್ ಆರೋಪದಿಂದ ಮಾನಸಿಕ ಕಿರುಕುಳ,...
04-09-26 04:44 pm
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
05-09-26 04:55 pm
HK News Staffer
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm
ಅಷ್ಟಮಿ ಭಜನಾ ಕಾರ್ಯಕ್ರಮದಲ್ಲಿ ಹೃದಯಾಘಾತ ; ತೊಕ್ಕೂರ...
05-09-26 02:04 pm
ತ್ರಿಶೂರ್ ನಲ್ಲಿ ಗುರುವಾಯೂರು ದರ್ಶನ ಮುಗಿಸಿ ಹೊರಟಿದ...
05-09-26 01:13 pm
ಉಪ್ಪಿನಂಗಡಿ ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಗಳಿಂದ...
05-09-26 11:52 am