ಬ್ರೇಕಿಂಗ್ ನ್ಯೂಸ್
19-09-26 09:57 pm HK News Staffer ಕ್ರೈಂ
ಪುತ್ತೂರು, ಸೆ.19: ಗಂಡನೊಂದಿಗಿನ ಕೌಟುಂಬಿಕ ಕಲಹದ ಸಿಟ್ಟಿನಲ್ಲಿ ಮಹಿಳೆಯೊಬ್ಬಳು ತನ್ನ ಜೊತೆಗಿದ್ದ ಇಬ್ಬರು ಎಳೆಯ ಮಕ್ಕಳನ್ನು ಬಾವಿಗೆ ಎಸೆದ ಘೋರ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ಪೆರ್ನೆ ಎಂಬಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ.
ಪತಿಯ ತಂಗಿಯ ಮಗು ಎರಡು ವರ್ಷದ ರಬೀಹಾ ಮೃತಪಟ್ಟಿದ್ದು, ಮಹಿಳೆಯ ಮಗು ನಾಲ್ಕು ವರ್ಷದ ಆಲಿಯಾ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಪೆರ್ನೆ ನಿವಾಸಿ ಸಿನಾನ್ (32) ಹಾಗೂ ಆತನ ಪತ್ನಿ ನೂರುನ್ನೀಸಾ (28) ನಡುವೆ ಫೋನ್ ಕರೆಯಲ್ಲಿ ವೈವಾಹಿಕ ವಿಚಾರಕ್ಕೆ ಸಂಬಂಧಿಸಿ ತೀವ್ರ ವಾಗ್ವಾದ ನಡೆದಿತ್ತು. ಈ ವೇಳೆ ಕೋಪಗೊಂಡ ಪತ್ನಿ ನೂರುನ್ನೀಸಾ, ಮನೆಯಲ್ಲಿದ್ದ ತನ್ನ ನಾಲ್ಕು ವರ್ಷದ ಮಗು ಹಾಗೂ ಪತಿಯ ತಂಗಿಯ ಎರಡು ವರ್ಷದ ಮಗುವನ್ನು ಕರೆದೊಯ್ದು ಮನೆಯ ಸಮೀಪದ ಬಾವಿಗೆ ಎಸೆದಿದ್ದಾಳೆ.
ಘಟನೆ ತಿಳಿದ ತಕ್ಷಣವೇ ಕಾರ್ಯ ಪ್ರವೃತ್ತರಾದ ಸ್ಥಳೀಯರು ಬಾವಿಗಿಳಿದು ಮಕ್ಕಳನ್ನು ಮೇಲಕ್ಕೆತ್ತಿದ್ದಾರೆ. ಆದರೆ, ಅಷ್ಟರಲ್ಲಿ ಪತಿಯ ತಂಗಿಯ ಮಗು ಮೃತಪಟ್ಟಿತ್ತು. ಆರೋಪಿತ ಮಹಿಳೆಯ ಸ್ವಂತ ಮಗುವಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ರವಾನಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ. ದುರಂತಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ (ಅ.ಕ್ರಂ 121/2026) ಪ್ರಕರಣ ದಾಖಲಾಗಿದೆ. ಕೃತ್ಯ ಎಸಗಿದ ನೂರುನ್ನಿಸಾಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.
A woman allegedly threw two young children into a well following a heated marital dispute with her husband at Perne in the Uppinangady police station limits on Saturday afternoon. One child died, while the other sustained serious injuries and is undergoing treatment at a private hospital in Mangaluru.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
19-09-26 09:57 pm
HK News Staffer
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm