ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.

ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.

ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm