ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.

ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.

ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm