ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.

ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.

ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am