ಬ್ರೇಕಿಂಗ್ ನ್ಯೂಸ್
14-01-21 12:36 pm Mangalore Correspondent ಕ್ರೈಂ
ಮಂಗಳೂರು, ಜ.14: ಮಂಗಳೂರು ನಗರದಲ್ಲಿ ಮಕ್ಕಳ ಕಳ್ಳರಿದ್ದಾರೆಂಬ ವದಂತಿ ಕೇಳಿಬಂದಿದೆ. ಬುಧವಾರ ಬೆಳಗ್ಗೆ ಕುದ್ರೋಳಿಯ ಅಳಕೆಯಲ್ಲಿ ಒಬ್ಬ ಮಹಿಳೆಯ ಬಗ್ಗೆ ಗುಮಾನಿ ವ್ಯಕ್ತಪಡಿಸಿ, ಜನರು ಸೇರಿ ಆಕೆಯನ್ನು ಗದರಿ, ಪೊಲೀಸರಿಗೊಪ್ಪಿಸಿದ್ದರು. ನಿನ್ನೆ ಸಂಜೆ ಹೊತ್ತಿಗೆ ಕೊಂಚಾಡಿಯ ಮಹಾಲಸಾ ದೇವಸ್ಥಾನ ಆವರಣದಲ್ಲಿ ಮಗುವೊಂದನ್ನು ಅಪಹರಿಸುವ ಯತ್ನ ನಡೆದಿದೆ ಎನ್ನಲಾಗಿದೆ.
ಕೊಂಚಾಡಿಯಲ್ಲಿ ಬೈಕಿನಲ್ಲಿ ಬಂದಿದ್ದ ಇಬ್ಬರು ಸೇರಿ ಆಟವಾಡುತ್ತಿದ್ದ ಮಗುವೊಂದನ್ನು ಮುಸುಕು ಹಾಕಿ, ಹಿಡಿಯಲು ಯತ್ನಿಸಿದ್ದಾರೆ. ಮಗುವಿನ ತಲೆಯ ಭಾಗಕ್ಕೆ ಮುಸುಕು ಹಾಕುತ್ತಿದ್ದಂತೆ ಅಲ್ಲಿ ಆಟವಾಡುತ್ತಿದ್ದ ಇತರೇ ಮಕ್ಕಳು ಬೊಬ್ಬೆ ಹಾಕಿದ್ದಾರೆ. ಅಷ್ಟರಲ್ಲಿ ಬೈಕಿನಲ್ಲಿ ಬಂದವರು ಪರಾರಿಯಾಗಿದ್ದಾರೆ.
ಮಕ್ಕಳ ಮಾತು ಕೇಳಿ, ಸ್ಥಳೀಯರು ಭಯಗೊಂಡಿದ್ದು ಅಪಹರಣ ಯತ್ನಕ್ಕೆ ಒಳಗಾದ ಮಗುವಿನ ಪಾಲಕರು ಕಂಕನಾಡಿ ನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಆಗಂತುಕರ ಪತ್ತೆಗಾಗಿ ಕೊಂಚಾಡಿ ಪರಿಸರದ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ಮಕ್ಕಳ ಅಪಹರಣಕ್ಕೆ ಯತ್ನಿಸಿದ್ದು ಹೌದೋ, ಅಲ್ಲವೋ ಎನ್ನುವ ಬಗ್ಗೆ ಖಾತ್ರಿಪಡಿಸಲು ದಾಖಲೆ ಹುಡುಕುತ್ತಿದ್ದಾರೆ.
ಇದೇ ವೇಳೆ, ಅಳಕೆಯಲ್ಲಿ ಮಹಿಳೆಯ ಕಿತಾಪತಿ ಬಗ್ಗೆ ಬಂದರು ಪೊಲೀಸರಲ್ಲಿ ವಿಚಾರಿಸಿದರೆ, ಅಲ್ಲಿ ಮಹಿಳೆಯ ಬಗ್ಗೆ ಗುಮಾನಿ ಬಂದಿದ್ದು ಫೋಟೊ ತೆಗೆದು ವಾಟ್ಸಾಪ್ ನಲ್ಲಿ ಹಾಕಿದ್ದು ಗೊತ್ತು. ಅದು ಮಕ್ಕಳ ಅಪಹರಣದ ವಿಷಯ ಅಲ್ಲ. ಆ ಮಹಿಳೆ, ಉತ್ತರ ಭಾರತದ ಮೂಲದವರಾಗಿದ್ದು ಅಳಕೆ ಪರಿಸರದಲ್ಲಿ ಗುಜರಾತಿ ಮೂಲದವರ ಮನೆಗೆ ಬಂದು ಹಣ ಕೇಳುತ್ತಿದ್ದರಂತೆ. ಅದರ ಬಗ್ಗೆ ಯಾರೂ ಕಂಪ್ಲೇಂಟ್ ಕೊಟ್ಟಿಲ್ಲ ಎಂದು ತಿಳಿಸಿದ್ದಾರೆ.
A woman was held by locals at Konchady in Mangalore alleging of Kidnapping Children. The Kankandy Town police have registered the case against her.
08-09-25 02:41 pm
Bangalore Correspondent
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
08-09-25 02:02 pm
HK News Desk
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
08-09-25 12:08 pm
Udupi Correspondent
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm