ಬ್ರೇಕಿಂಗ್ ನ್ಯೂಸ್
16-01-21 02:29 pm Mangalore Correspondent ಕ್ರೈಂ
ಮಂಗಳೂರು, ಜ.16: ಕೊಂಚಾಡಿಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾವೂರಿನ ರಕ್ಷಕ್ ಶೆಟ್ಟಿ (22), ಬೊಂದೇಲ್ ನಿವಾಸಿ ಆಲಿಸ್ಟರ್ ತಾವ್ರೋ(21) ಮತ್ತು ಕಾವೂರಿನ ಕೆಐಓಸಿಎಲ್ ಕ್ವಾಟ್ರಸ್ ನಿವಾಸಿ ರಾಹುಲ್ ಸಿನ್ಹಾ(21) ಬಂಧಿತರು.


ಪೊಲೀಸರು ಸಿಸಿಟಿವಿ ಆಧರಿಸಿ, ತನಿಖೆ ನಡೆಸಿದಾಗ ಮೂರು ಮಂದಿ ಒಂದೇ ಸ್ಕೂಟರಿನಲ್ಲಿ ಬಂದಿದ್ದು ಕೊಂಚಾಡಿ ಮಹಾಲಸಾ ನಾರಾಯಣಿ ದೇವಸ್ಥಾನದ ಮುಂಭಾಗದಲ್ಲಿ ಬಾಲಕರನ್ನು ಅಪಹರಣ ನಡೆಸಲು ಯತ್ನಿಸಿದ್ದು ಕಂಡುಬಂದಿತ್ತು. ಮೂವರನ್ನು ಕೂಡ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಬೇರೆಯದ್ದೇ ಕತೆ ಹೇಳಿದ್ದಾರೆ.
ತಾವು ಅಣಕು (ಫ್ರಾಂಕ್) ವಿಡಿಯೋ ಮಾಡುವುದಕ್ಕಾಗಿ ಬಾಲಕರನ್ನು ಗೋಣಿ ಚೀಲದಲ್ಲಿ ಮುಸುಕು ಹಾಕುವ ಪ್ರಯೋಗ ನಡೆಸಿದ್ದೆವು. ಅದನ್ನು ಮೊಬೈಲ್ ನಲ್ಲಿ ವಿಡಿಯೋ ಮಾಡಿ, ಯೂಟ್ಯೂಬ್ ಅಪ್ಲೋಡ್ ಮಾಡಲು ಯೋಜನೆ ಹಾಕಿದ್ದೆವು. ಬೇರಾವುದೇ ದುರುದ್ದೇಶ ಇರಲಿಲ್ಲ ಎಂದು ಆರೋಪಿಗಳು ತಪ್ಪೊಪ್ಪಿಗೆ ನೀಡಿದ್ದಾರೆ. ಆದರೆ, ಪೊಲೀಸರು ಮೂವರ ಪೂರ್ವಾಪರ ವಿಚಾರಿಸಿದಾಗ, ಮೂವರ ವಿರುದ್ಧವೂ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವುದು ಕಂಡುಬಂದಿದೆ.


ರಕ್ಷಕ್ ಶೆಟ್ಟಿ ವಿರುದ್ಧ ಮಂಗಳೂರು ಪೂರ್ವ ಠಾಣೆಯಲ್ಲಿ 2018ರಲ್ಲಿ ಹಲ್ಲೆ, ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ. ಆಲಿಸ್ಟರ್ ವಿರುದ್ಧ ಕಾವೂರು ಠಾಣೆಯಲ್ಲಿ 2017, 2019 ಮತ್ತು 2020ರಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಗಾಂಜಾ ಸಂಬಂಧ ಪ್ರಕರಣ ದಾಖಲಾಗಿದೆ. ರಾಹುಲ್ ಸಿನ್ಹ ವಿರುದ್ಧವೂ ಕಾವೂರು ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಹೀಗಾಗಿ ಆರೋಪಿಗಳು ತಪ್ಪೊಪ್ಪಿಗೆ ಹೇಳಿಕೆ ನೀಡಿದರೂ, ಪೊಲೀಸರು ಅವರನ್ನು ಅಷ್ಟಕ್ಕೇ ಬಿಡಲು ತಯಾರಿಲ್ಲ. ಅಪರಾಧ ಪ್ರಕರಣಗಳ ಹಿನ್ನೆಲೆ ಇರುವುದರಿಂದ ಬಾಲಕರನ್ನು ಯಾವುದೋ ಉದ್ದೇಶ ಇಟ್ಟುಕೊಂಡು ಕಿಡ್ನಾಪ್ ನಡೆಸಲು ಸಂಚು ಹೂಡಿದ್ದರೇ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಬುಧವಾರ ಸಂಜೆ ಏಳು ಗಂಟೆ ಸುಮಾರಿಗೆ ಮೂವರು ಬಾಲಕರು ದೇವಸ್ಥಾನ ಪರಿಸರದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ, ಮೂವರು ಆಗಂತುಕರು ಗೋಣಿಚೀಲ ಮುಸುಕು ಹಾಕಿ ಅಪಹರಿಸಲು ಯತ್ನಿಸಿದ್ದರು. ಆದರೆ, ಬಾಲಕರು ಬೊಬ್ಬಿಟ್ಟಿದ್ದರಿಂದ ಅಲ್ಲಿಂದ ಓಡಿ ಹೋಗಿದ್ದರು. ವಿಡಿಯೋ ಮಾಡುವುದಕ್ಕಾಗಿಯೇ ಈ ಕೃತ್ಯ ನಡೆಸಿದ್ದರೆ, ಏನೋ ಮಾಡಲು ಹೋಗಿ ಹರೆಯದ ಯುವಕರು ಜೈಲು ಪಾಲಾದಂತಾಗಿದೆ.
Video:
Three youths who were in an attempt of Kidnapping three children at Konchady in Mangalore have been arrested by the city police.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm