ಬ್ರೇಕಿಂಗ್ ನ್ಯೂಸ್
16-01-21 06:22 pm Mangalore Correspondent ಕ್ರೈಂ
ಮಂಗಳೂರು, ಜ.16: ದೇವಸ್ಥಾನಗಳಿಗೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡಿಕೊಂಡು ಹ್ಯಾಂಡ್ ಬ್ಯಾಗ್ ಎಳೆದು ಹಣ ಎಗರಿಸುವ ಪ್ರಕರಣವನ್ನು ಬೆಂಬತ್ತಿದ ಬಜ್ಪೆ ಪೊಲೀಸರು ಗದಗ ಮೂಲದ ಕಳ್ಳರ ಕುಟುಂಬವನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಯಮುನವ್ವ ಮುತ್ತಪ್ಪ ಛಲವಾದಿ (55) , ಪ್ರಕಾಶ್ ಚೆನ್ನಪ್ಪ (27) , ಶೋಭಾ ಮುಟಗಾರ (45), ಕುಮಾರವ್ವ ಮಾರುತಿ ಮೆಟಗಾರ (40), ಶಾಂತಮ್ಮ ಮೆಟಗಾರ(56), ಚಂದ್ರಶೇಖರ್ ಕಮರುಡಿ (49) ಬಂಧಿತರು.


ಜ.12ರಂದು ಯಶೋಧಾ ಗೌಡ ಎಂಬವರು ಕಟೀಲು ದೇವಸ್ಥಾನಕ್ಕೆ ಹೋಗಿದ್ದಾಗ ನಾಲ್ವರು ಮಹಿಳೆಯರು ಮತ್ತು ಒಬ್ಬ ಪುರುಷನಿದ್ದ ತಂಡ, ಅವರ ಬ್ಯಾಗ್ ಎಳೆದು ಅದರಲ್ಲಿದ್ದ ನಾಲ್ಕು ಸಾವಿರ ಹಣವನ್ನು ಕಳವು ಮಾಡಿತ್ತು. ಪ್ರಕರಣ ಸಂಬಂಧಿಸಿ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಂಡ ತೂಫಾನ್ ವಾಹನದಲ್ಲಿ ಪರಾರಿಯಾಗಿದ್ದರು ಎಂಬ ಸುಳಿವು ಆಧರಿಸಿ, ತನಿಖೆ ಕೈಗೊಂಡಿದ್ದರು. ಬಳಿಕ ಪೊಳಲಿ ದೇವಸ್ಥಾನದ ಬಳಿ ತೂಫಾನ್ ವಾಹನ ಕಂಡುಬಂದಿದ್ದು ಪೊಲೀಸರು ಅಡ್ಡೂರಿನಲ್ಲಿ ಅಡ್ಡಗಟ್ಟಿ ತಪಾಸಣೆ ನಡೆಸಿದಾಗ ಕುಟುಂಬಸ್ಥರ ಕಳವು ಕೃತ್ಯ ಬಯಲಾಗಿದೆ.


ವಿಚಾರಣೆ ವೇಳೆ, ಇದೇ ತಂಡ ಕೊಲ್ಲೂರು, ಮುರುಡೇಶ್ವರ ದೇವಸ್ಥಾನ ಸೇರಿದಂತೆ ವಿವಿಧ ಕಡೆಗಳಲ್ಲಿ ಜನ ಸೇರುವ ಉತ್ಸವ ಸಂದರ್ಭ ಮಹಿಳೆಯರ ಬ್ಯಾಗ್ ಕಳವುಗೈದು ಹಣ ಎಗರಿಸುವ ಜಾಲದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಆರೋಪಿಗಳಿಂದ ಏಳು ಮೊಬೈಲ್, 71 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ.
Bajpe police arrested six people include four women of Gadag district theft case in the temple premise
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm