ಬ್ರೇಕಿಂಗ್ ನ್ಯೂಸ್
18-01-21 06:56 pm Mangalore Correspondent ಕ್ರೈಂ
ಉಳ್ಳಾಲ, ಜ.18: ಹದಿನೈದು ವರ್ಷದ ಹಿಂದೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಬ್ರಾಹ್ಮಣ ಹೆಣ್ಮಗಳನ್ನು ಗಂಡನಿಂದ ದೂರವಾದ ಬಳಿಕ ಉಳ್ಳಾಲ ಎಸ್ ಡಿಪಿಐ ಮುಖಂಡನೊಬ್ಬ ಆಕೆಯ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಲ್ಲದೆ ಇಬ್ಬರು ಸಣ್ಣ ಮಕ್ಕಳಿಗೂ ಲೈಂಗಿಕ ಕಿರುಕುಳ ಕೊಟ್ಟಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಎಸ್ ಡಿಪಿಐ ಉಳ್ಳಾಲ ಸಮಿತಿ ಕ್ಷೇತ್ರಾಧ್ಯಕ್ಷ ಸಿದ್ದೀಕ್ ಉಳ್ಳಾಲ್ ಕಾಮುಕ ಕೃತ್ಯ ನಡೆಸಿರುವ ಆರೋಪಿಯಾಗಿದ್ದು ಕೇಸು ದಾಖಲಾಗುತ್ತಲೇ ಪರಾರಿಯಾಗಿದ್ದಾನೆ. ಜನವರಿ 16 ರಂದು ಈತನ ವಿರುದ್ಧ ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದ್ದು ಪೊಲೀಸರು ಗಂಭೀರ ಪ್ರಕರಣವನ್ನು ಹೊರಗೆ ಬಾರದಂತೆ ಮುಚ್ಚಿಟ್ಟಿದ್ದಾರೆಂಬ ಆರೋಪ ಕೇಳಿಬಂದಿದೆ.
ಕೊಣಾಜೆ ನಡುಪದವಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ಬ್ರಾಹ್ಮಣ ಯುವತಿಯನ್ನು ಕೇರಳ ಮೂಲದ ಮುಸ್ಲಿಂ ಯುವಕ 15 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ಆಕೆಯನ್ನ ಮುಸ್ಲಿಂ ಆಗು ಮತಾಂತರಗೊಳಿಸಿದ್ದ. ಮತಾಂತರ ನಂತರ ಯುವತಿ ಆಕೆಯ ಹೆಸರನ್ನು ಹಿಬಾ ಫಾತಿಮಾ ಎಂದು ಬದಲಿಸಿಕೊಂಡಿದ್ದಳು. ಯುವತಿಯನ್ನು ಪ್ರೀತಿಸಿ ಮದುವೆಯಾದ ಕೇರಳದ ಯುವಕ ಆಕೆಗೆ ಎರಡು ಹೆಣ್ಮಕ್ಕಳನ್ನು ಕರುಣಿಸಿದ ಬಳಿಕ ಎರಡು ವರ್ಷಗಳ ಹಿಂದೆ ನಾಪತ್ತೆಯಾಗಿದ್ದಾನೆ.

ಫಾತಿಮಾ ತನ್ನ 9 ವರ್ಷ ಮತ್ತು 6 ವರ್ಷದ ಎರಡು ಮಕ್ಕಳೊಂದಿಗೆ ಉಳ್ಳಾಲದ ಒಂಭತ್ತುಕೆರೆಯಲ್ಲಿ ವಾಸವಾಗಿದ್ದಳು. ಈ ಸಮಯದಲ್ಲಿ ಉಳ್ಳಾಲದ SDPI ಅಧ್ಯಕ್ಷ ಸಿದ್ದೀಕ್ ಉಳ್ಳಾಲ, ಆಕೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಿತನಾಗಿದ್ದ. ಅಲ್ಲದೆ, ಆಕೆಯೊಂದಿಗೆ ಸಲುಗೆ ಬೆಳೆಸಿಕೊಂಡು ಅಕ್ರಮ ಸಂಬಂಧಕ್ಕೆ ಮುಂದಾಗಿದ್ದ. ಆದರೆ, ಈ ನಡುವೆ ಆತ ಮಹಿಳೆಯ ಇಬ್ಬರು ಮಕ್ಕಳ ಮೇಲೆ ಕಣ್ಣು ಹಾಕಿದ್ದ. ಲೈಂಗಿಕ ಕಿರುಕುಳ ನೀಡಲಾರಂಭಿಸಿದ್ದ. ಇದರಿಂದ ಎಚ್ಚೆತ್ತ ಮಹಿಳೆ ಕಳೆದ ಜನವರಿ 16 ರಂದು ಉಳ್ಳಾಲ ಠಾಣೆಗೆ ದೂರು ನೀಡಿದ್ದಾಳೆ.
ಮಹಿಳೆಯ ಎರಡು ಹೆಣ್ಮಕ್ಕಳ ಮುಂದೆ ಸಿದ್ದೀಕ್ ಬೆತ್ತಲಾಗಿ ನಿಲ್ಲುತ್ತಿದ್ದನಂತೆ. ಎಚ್ಚೆತ್ತ ಮಹಿಳೆ ಪ್ರತಿಭಟಿಸಿ ದೂರು ಕೊಡುವುದಾಗಿ ಹೇಳಿದ್ದಳು. ಕಳೆದ ಡಿಸೆಂಬರ್ ತಿಂಗಳಲ್ಲೇ ಈ ಬೆಳವಣಿಗೆ ನಡೆದಿದ್ದು ಮಹಿಳೆಗೆ SDPI ಮುಖಂಡರು ಸೇರಿ ಕೊಲೆ ಬೆದರಿಕೆ ಹಾಕಿದ್ದಾರೆಂದು ಆರೋಪಿಸಿದ್ದಾಳೆ. ಇದರಿಂದ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಮಹಿಳೆ, ಇದೀಗ ಮತ್ತೆ ಸಿದ್ದೀಕನ ಕಾಮದಾಟ ಜಾಸ್ತಿ ಯಾಗುತ್ತಿಲೇ ಉಳ್ಳಾಲ ಠಾಣೆಗೆ ದೂರು ನೀಡಿದ್ದು ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಸಿದ್ದೀಕ್ ಪರಾರಿಯಾಗಿದ್ದಾನೆ.
ಕಳೆದ ಶನಿವಾರ ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇಂತಹ ಗಂಭೀರ ಪ್ರಕರಣದ ಬಗ್ಗೆ ಹಿರಿಯ ಪೊಲೀಸರು ಮಾತ್ರ ಟಿಕ್ ಪಿಟಿಕ್ ಎನ್ನುತ್ತಿಲ್ಲ. ಆರೋಪಿಯ ಬಂಧನಕ್ಕೂ ಮುಂದಾಗಿಲ್ಲ.
Love jihad and sexual assault to girl child Ullal police registered pocso act against SDPI leader
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm