ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
07-09-25 07:43 pm
Bangalore Correspondent
Fine, Violation, Home Minister: ಮುಖ್ಯಸ್ಥರಿಗೂ...
07-09-25 10:17 am
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
07-09-25 08:33 pm
HK News Desk
UPI Transaction Limit: ಯುಪಿಐ ಪಾವತಿ ಮಿತಿ ಹೆಚ್ಚ...
06-09-25 10:34 am
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
07-09-25 11:24 pm
Mangalore Correspondent
ಬಂಗ್ಲೆಗುಡ್ಡೆ ಕಾಡಿಗೆ ಮತ್ತೆ ಭದ್ರತೆ ; ಸ್ಥಳ ಮಹಜರು...
07-09-25 10:59 pm
ಅಪ್ರಾಪ್ತ ಬಾಲಕನ ತ್ರಿಬಲ್ ರೈಡ್ ; ಸ್ಕೂಟರ್ ಕೊಟ್ಟ ಹ...
07-09-25 10:04 pm
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಗೆಹರಿಯದ ಕೆಂಪು ಕಲ್ಲು...
07-09-25 02:25 pm
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm