ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
29-06-26 10:33 pm
HK News Desk
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
29-06-26 03:35 pm
HK News Staffer
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
ಜಾತಿ ಹುಟ್ಟಿನಿಂದಲೇ ಬರಬೇಕು, ಇಸ್ಲಾಂಗೆ ಮತಾಂತರಗೊಂಡ...
28-06-26 04:03 pm
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
30-06-26 11:39 am
HK News Staffer
ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ಬಗ್ಗೆ ಅವಹೇಳನ...
27-06-26 02:44 pm
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
29-06-26 07:25 pm
HK News Staffer
ನಡುರಾತ್ರಿ ಬೆಡ್ ರೂಮ್ ಕಿಟಕಿಗೆ ಕೈಹಾಕಿ ಮಹಿಳೆಯ ಸರ...
29-06-26 06:45 pm
ತಾಯಿಯ ಹೆಸರಿನಲ್ಲಿದ್ದ ಆಸ್ತಿ ಕಿತ್ತುಕೊಂಡ ಮಗ, ತಂದೆ...
29-06-26 04:45 pm
ವಿಟ್ಲ ಬಳಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್...
29-06-26 02:00 pm
Panambur Robbery, Mangalore: ಮುಂಬೈನಿಂದ ಬರುತ್ತ...
29-06-26 09:32 am