ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm