ಬ್ರೇಕಿಂಗ್ ನ್ಯೂಸ್
19-01-21 11:13 am Mangalore Correspondent ಕ್ರೈಂ
ಬೆಳ್ತಂಗಡಿ, ಜ.19: ಮಗನೇ ತಂದೆಯನ್ನು ಮರದ ಸಲಾಕೆಯಿಂದ ಬಡಿದು ಹತ್ಯೆಗೈದ ಘಟನೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಡು ಮುಂಡ್ಯೊಟ್ಟು ಎಂಬಲ್ಲಿ ನಡೆದಿದೆ.
ಶ್ರೀಧರ ಪೂಜಾರಿ(55) ಹತ್ಯೆಯಾದ ವ್ಯಕ್ತಿಯಾಗಿದ್ದು ಆರೋಪಿ ಮಗ ಹರೀಶ್ (27) ನನ್ನು ಪೊಲೀಸರು ಬಂಧಿಸಿದ್ದಾರೆ. ಮಗ ಹರೀಶ್ ಬೆಂಗಳೂರಿನಲ್ಲಿ ಕೆಲಸಕ್ಕಿದ್ದು ಅಲ್ಲಿ ಬೇರೆ ಹುಡುಗಿಯನ್ನು ಪ್ರೀತಿಸಿ ಮದುವೆಯಾಗಿದ್ದ. ಇತ್ತೀಚೆಗೆ ತನ್ನ ಮನೆಗೆ ಬಂದಿದ್ದ ಹರೀಶನ ಮದುವೆ ವಿಚಾರದಲ್ಲಿ ತಂದೆಯೊಂದಿಗೆ ಜಗಳ ನಡೆದಿತ್ತು. ಬೇರೆ ಜಾತಿಯ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ತಂದೆ ಆಕ್ಷೇಪಿಸಿದ್ದಲ್ಲದೆ ತನ್ನ ಮನೆಗೆ ಆಕೆಯನ್ನು ಕರೆತರದಂತೆ ಸೂಚಿಸಿದ್ದರು. ಈ ವಿಚಾರದಲ್ಲಿ ಹಲವು ಸಮಯದಿಂದ ಇಬ್ಬರ ನಡುವೆ ಜಟಾಪಟಿ ನಡೆಯುತ್ತಿತ್ತು.
ಸೋಮವಾರ ಮಧ್ಯಾಹ್ನ ಇದೇ ವಿಚಾರದಲ್ಲಿ ಮನೆಯಲ್ಲಿ ಜಗಳ ನಡೆದಿತ್ತು. ಸಂಜೆ 6.30ರ ವೇಳೆಗೆ ತನ್ನ ಸಹೋದರನ ಮನೆಗೆ ತೆರಳಿದ್ದ ಶ್ರೀಧರ ಪೂಜಾರಿ ಅಲ್ಲಿ ಮಗನನ್ನು ಬೈಯುತ್ತಿದ್ದರು. ಕುಡಿದ ಮತ್ತಿನಲ್ಲಿದ್ದ ಹರೀಶ ಅಲ್ಲಿಗೆ ತೆರಳಿ, ಕೈಗೆ ಸಿಕ್ಕಿದ ಮರದ ಸಲಾಕೆಯಿಂದ ತಂದೆಯ ತಲೆಗೆ ಹೊಡೆದಿದ್ದಾನೆ.
ತೀವ್ರ ರಕ್ತಸ್ರಾವಕ್ಕೊಳಗಾದ ಶ್ರೀಧರ ಪೂಜಾರಿಯನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಒಯ್ದಿದ್ದು ಅಲ್ಲಿ ಪರೀಕ್ಷೆ ನಡೆಸಿದ ವೈದ್ಯರು ಮೃತಪಟ್ಟಿದ್ದಾಗಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಆರೋಪಿ ಹರೀಶನನ್ನು ಬಂಧಿಸಿದ್ದಾರೆ.
Son savagely beat his father to death using Hammer in Belthangady. It is learnt that he was angry at his father's refusal to accept his wife as daughter-in-law.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am