ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
15-08-26 10:08 pm
HK News Staffer
Mangalore City Centre KFC raided: Six-month-o...
15-08-26 09:30 pm
ಗುಟ್ಕಾ, ಪಾನ್ ಮಸಾಲ ಪ್ರತ್ಯೇಕ ಕೊಟ್ಟರೆ ನಿರ್ಬಂಧ ಇಲ...
15-08-26 04:52 pm
Infosys Mangalore, News: ಕೊಟ್ಟಾರದ ಇನ್ಫೋಸಿಸ್ ಕ...
14-08-26 10:23 pm
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
15-08-26 09:06 pm
HK News Staffer
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm
ಕೆಲಸ ಮಾಡಿಕೊಡುವ ನೆಪದಲ್ಲಿ ಪದೇಪದೇ ಹಣಕ್ಕಾಗಿ ಒತ್ತಾ...
15-08-26 02:06 pm