ಬ್ರೇಕಿಂಗ್ ನ್ಯೂಸ್
13-08-20 01:44 pm Headline Karnataka News Network ಕ್ರೈಂ
ಕೋಲಾರ, ಆಗಸ್ಟ್ 13: ಹಾಡಹಗಲೇ ಯುವತಿ ಹಾಗು ಅವರ ತಂಗಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೇಳೆ, ದುಷ್ಕರ್ಮಿಗಳು ಇನ್ನೋವಾ ಕಾರಲ್ಲಿ ಬಂದು ಅಪಹರಣ ಮಾಡಿರುವ ಸಿನಿಮೀಯ ಘಟನೆ ಕೋಲಾರ ನಗರದ ಎಂಬಿ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ಸುಮಾರು 11.45 ರ ವೇಳೆಗೆ ನಡೆದಿದೆ. ನಗರದ ಕಿಲ್ಲಾರಿಪೇಟೆ ಬಡಾವಣೆಯ 23 ವರ್ಷದ ಯುವತಿಯನ್ನ ನಗರದ ನಿವಾಸಿ ಶಿವು ಹಾಗು ಅವರ ಸ್ನೇಹಿತರು ಇನ್ನೋವಾ ಕಾರಲ್ಲಿ ಕಿಡ್ನಾಪ್ ಮಾಡಿರುವುದಾಗಿ ಪೋಷಕರು ಕೋಲಾರದ ಗಲ್ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿ ಹಾಗು ತಂಗಿ ರಸ್ತೆಯಲ್ಲಿ ನಡೆದು ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ, ಇನ್ನೋವಾ ಕಾರಲ್ಲಿ ಎದುರಿಗೆ ಬಂದ ದುಷ್ಕರ್ಮಿಗಳು ಸ್ವಲ್ಪ ದೂರಕ್ಕೆ ಕಾರು ನಿಲ್ಲಿಸಿ ಯುವತಿಯನ್ನ ಎಳೆದೊಯ್ದಿರುವ ದೃಶ್ಯಗಳು ಪಕ್ಕದ ಎಲೆಕ್ಟ್ರಾನಿಕ್ ಮಳಿಗೆಯೊಂದರ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಯುವತಿಯ ತಂಗಿ ಬಿಡಿಸಲು ಹೋದಾಗ ಬಲವಾಗಿ ತಳ್ಳಿ, ಕ್ಷಣ ಮಾತ್ರದಲ್ಲಿ ಸ್ಥಳದಿಂದ ಪರಾರಿಯಾಗಿದ್ದಾರೆ. ಅಪಹರಣ ಮಾಡಿದಾಗ ಕಾರಲ್ಲಿ ನಾಲ್ವರು ಇದ್ದರು ಎನ್ನಲಾಗಿದ್ದು, ಶಿವು ಹಾಗು ಅವರ ಸ್ನೇಹಿತರು ಕೃತ್ಯದಲ್ಲಿ ಭಾಗಯಾಗಿರುವ ಆರೋಪವಿದೆ.
ಯುವತಿಯು ಬಿಎಸ್ಸಿ ಓದುತ್ತಿದ್ದು ಪರಸ್ಪರ ಒಬ್ಬರಿಗೊಬ್ಬರು ಪರಿಚಯವೂ ಇದೆ. ಪರಿಚಯ ಪ್ರೀತಿಗೆ ತಿರುಗಿದ್ದು, ಮದುವೆ ಮಾಡಿಕೊಳ್ಳುವ ಪ್ರಸ್ತಾಪ ಬಂದಾಗ ಯುವತಿ ತನ್ನ ಪೋಷಕರ ಒಪ್ಪಿಗೆ ಬೇಕಿದೆ ಎಂದಿದ್ದಾರೆ. ಇಬ್ಬರ ಪ್ರೀತಿಗೆ ಪೋಷಕರು ವಿರೋಧ ಮಾಡಿದ್ದಾರೆ. ಇದರಿಂದ ಕೆರಳಿರುವ ಭಗ್ನ ಪ್ರೇಮಿ ಶಿವು, ಕಿಡ್ನಾಪ್ನಂತಹ ದುಷ್ಕೃತ್ಯಕ್ಕೆ ಕೈ ಹಾಕಿದ್ದಿರಬಹುದು ಎಂದು ಶಂಕಿಸಲಾಗಿದೆ.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm