ಬ್ರೇಕಿಂಗ್ ನ್ಯೂಸ್
20-01-21 10:44 am Headline Karnataka News Network ಕ್ರೈಂ
ಮಲಪ್ಪುರಂ, ಜ.20 : ಹದಿನೇಳು ವರ್ಷದ ಬಾಲಕಿಯ ಮೇಲೆ 38 ಮಂದಿ ಕಳೆದ ಹಲವು ತಿಂಗಳಿಂದ ನಿರಂತರ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಎಸಗಿರುವುದು ಮಲಪ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು 44 ಮಂದಿಯ ವಿರುದ್ಧ 32 ಪ್ರಕರಣಗಳನ್ನು ದಾಖಲಿಸಿದ್ದು 20 ಮಂದಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನಲ್ಲಿ ಕಳೆದ 5 ವರ್ಷಗಳಿಂದ ಈ ಘಟನೆಗಳು ವರದಿಯಾಗಿವೆ. ಪಾಂಡಿಕ್ಕಾಡ್ ವಲಯದಲ್ಲಿರುವ ಪುಟ್ಟ ಕಾಲನಿಯಲ್ಲಿ ಬಾಲಕಿ ತಾಯಿಯೊಂದಿಗೆ ಜೀವಿಸುತ್ತಿದ್ದಳು. 2015ರಲ್ಲಿ ತಾಯಿಯ ದೂರಿನ ಆಧಾರದಲ್ಲಿ ಸ್ಥಳೀಯ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಗೆಳೆಯನೊಂದಿಗೆ ತೆರಳಿದ್ದಳು ಎಂದು ಕುಟುಂಬ ಆರೋಪಿಸಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಆಗ ಎರಡು ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕುಟುಂಬದ ದೂರಿನ ಆಧಾರದಲ್ಲಿ 2017ರಲ್ಲಿ ಕೂಡ ಇದೇ ರೀತಿಯ ಪ್ರಕರಣ ದಾಖಲಿಸಲಾಗಿತ್ತು. ಈ ಎಲ್ಲ ಪ್ರಕರಣಗಳಲ್ಲಿ ಆರೋಪಿಗಳನ್ನು ಪೋಕ್ಸೊ ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಆಕೆಯ ಕುಟುಂಬ ಮತ್ತೆ ನಾಪತ್ತೆ ದೂರು ದಾಖಲಿಸಿತ್ತು. ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆಯಲ್ಲಿ ಬಾಲಕಿ 2 ಲೈಂಗಿಕ ಹಲ್ಲೆ ಸೇರಿದಂತೆ 15 ಮಂದಿಯ ಕಿರುಕುಳದ ಘಟನೆಗಳನ್ನು ಉಲ್ಲೇಖಿಸಿದ್ದಳು. ತರುವಾಯ ಬಾಲಕಿಯನ್ನು ಆಶ್ರಯ ಧಾಮಕ್ಕೆ ಕಳುಹಿಸಲಾಯಿತು. ತಿಂಗಳ ನಂತರ ಬಾಲಕಿಯ ಇನ್ನೊಂದು ಹೇಳಿಕೆ ದಾಖಲಿಸಲಾಗಿತ್ತು. ಈ ಸಂದರ್ಭ ಬಾಲಕಿ 12ಕ್ಕೂ ಅಧಿಕ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಘಟನೆಗಳನ್ನು ಉಲ್ಲೇಖಿಸಿದ್ದಾಳೆ.
A 17-year-old girl from Kerala has been allegedly sexually abused and harassed by more than 44 men over the past few months, police said, adding that seven rape cases have been filed based on her accounts since 2016.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am