ಬ್ರೇಕಿಂಗ್ ನ್ಯೂಸ್
20-01-21 10:44 am Headline Karnataka News Network ಕ್ರೈಂ
ಮಲಪ್ಪುರಂ, ಜ.20 : ಹದಿನೇಳು ವರ್ಷದ ಬಾಲಕಿಯ ಮೇಲೆ 38 ಮಂದಿ ಕಳೆದ ಹಲವು ತಿಂಗಳಿಂದ ನಿರಂತರ ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಎಸಗಿರುವುದು ಮಲಪ್ಪುರದಲ್ಲಿ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿ ಪೊಲೀಸರು 44 ಮಂದಿಯ ವಿರುದ್ಧ 32 ಪ್ರಕರಣಗಳನ್ನು ದಾಖಲಿಸಿದ್ದು 20 ಮಂದಿಯನ್ನು ಬಂಧಿಸಿದ್ದಾರೆ.
ಮಲಪ್ಪುರಂ ಜಿಲ್ಲೆಯ ಪಾಂಡಿಕ್ಕಾಡ್ನಲ್ಲಿ ಕಳೆದ 5 ವರ್ಷಗಳಿಂದ ಈ ಘಟನೆಗಳು ವರದಿಯಾಗಿವೆ. ಪಾಂಡಿಕ್ಕಾಡ್ ವಲಯದಲ್ಲಿರುವ ಪುಟ್ಟ ಕಾಲನಿಯಲ್ಲಿ ಬಾಲಕಿ ತಾಯಿಯೊಂದಿಗೆ ಜೀವಿಸುತ್ತಿದ್ದಳು. 2015ರಲ್ಲಿ ತಾಯಿಯ ದೂರಿನ ಆಧಾರದಲ್ಲಿ ಸ್ಥಳೀಯ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಬಾಲಕಿ ತನ್ನ ಗೆಳೆಯನೊಂದಿಗೆ ತೆರಳಿದ್ದಳು ಎಂದು ಕುಟುಂಬ ಆರೋಪಿಸಿತ್ತು. ತನಿಖೆ ನಡೆಸಿದ ಪೊಲೀಸರು ಬಾಲಕಿಯನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದರು. ಆಗ ಎರಡು ಪೋಕ್ಸೋ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಕುಟುಂಬದ ದೂರಿನ ಆಧಾರದಲ್ಲಿ 2017ರಲ್ಲಿ ಕೂಡ ಇದೇ ರೀತಿಯ ಪ್ರಕರಣ ದಾಖಲಿಸಲಾಗಿತ್ತು. ಈ ಎಲ್ಲ ಪ್ರಕರಣಗಳಲ್ಲಿ ಆರೋಪಿಗಳನ್ನು ಪೋಕ್ಸೊ ಅಡಿಯಲ್ಲಿ ಬಂಧಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ನಡೆಯುತ್ತಿದೆ.
ಕಳೆದ ವರ್ಷ ಡಿಸೆಂಬರ್ನಲ್ಲಿ ಆಕೆಯ ಕುಟುಂಬ ಮತ್ತೆ ನಾಪತ್ತೆ ದೂರು ದಾಖಲಿಸಿತ್ತು. ಬಾಲಕಿಯನ್ನು ಪೊಲೀಸರು ಪತ್ತೆಹಚ್ಚಿ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಹೇಳಿಕೆ ದಾಖಲಿಸಿದ್ದರು. ಹೇಳಿಕೆಯಲ್ಲಿ ಬಾಲಕಿ 2 ಲೈಂಗಿಕ ಹಲ್ಲೆ ಸೇರಿದಂತೆ 15 ಮಂದಿಯ ಕಿರುಕುಳದ ಘಟನೆಗಳನ್ನು ಉಲ್ಲೇಖಿಸಿದ್ದಳು. ತರುವಾಯ ಬಾಲಕಿಯನ್ನು ಆಶ್ರಯ ಧಾಮಕ್ಕೆ ಕಳುಹಿಸಲಾಯಿತು. ತಿಂಗಳ ನಂತರ ಬಾಲಕಿಯ ಇನ್ನೊಂದು ಹೇಳಿಕೆ ದಾಖಲಿಸಲಾಗಿತ್ತು. ಈ ಸಂದರ್ಭ ಬಾಲಕಿ 12ಕ್ಕೂ ಅಧಿಕ ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದ ಘಟನೆಗಳನ್ನು ಉಲ್ಲೇಖಿಸಿದ್ದಾಳೆ.
A 17-year-old girl from Kerala has been allegedly sexually abused and harassed by more than 44 men over the past few months, police said, adding that seven rape cases have been filed based on her accounts since 2016.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm