ಬ್ರೇಕಿಂಗ್ ನ್ಯೂಸ್
21-01-21 04:28 pm Mangaluru Correspondent ಕ್ರೈಂ
ಮಂಗಳೂರು, ಜ.21: ದುಬೈನಿಂದ ಮಂಗಳೂರಿಗೆ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಮಡಿಕೇರಿ ಮೂಲದ ಉಬೈದ್ ಬೆಲ್ಲಿಯತ್ ಅಝೀಝ್ ಎಂಬಾತ ಆರೋಪಿಯಾಗಿದ್ದು 800 ಗ್ರಾಮ್ ಚಿನ್ನವನ್ನು ಗುದ ದ್ವಾರದಲ್ಲಿಟ್ಟು ತರುತ್ತಿದ್ದ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಉಂಡೆಯಾಗಿಸಿ ಗುದ ದ್ವಾರದಲ್ಲಿ ತುರುಕಿಸಿಟ್ಟುಕೊಂಡು ತರುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಬೈದ್ ಆಗಮಿಸಿದ್ದು ಪರಿಶೀಲನೆ ವೇಳೆ ಸಂಶಯ ಬಂದು ತಪಾಸಣೆ ನಡೆಸಿದ್ದಾರೆ. 24 ಕ್ಯಾರೆಟ್ ಗುಣಮಟ್ಟದ ಚಿನ್ನವಾಗಿದ್ದು 800 ಗ್ರಾಮ್ ಚಿನ್ನದ ಬೆಲೆ 44.2 ಲಕ್ಷ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ತೆಯಾಗದ್ದು ಹತ್ತು ಪಟ್ಟು ?!
ನಾಲ್ಕು ದಿನಗಳಿಗೊಮ್ಮೆ ಗುದದಲ್ಲಿ ಚಿನ್ನದ ಪೇಸ್ಟ್ ಇಟ್ಟುಕೊಂಡು ಅಕ್ರಮ ಸಾಗಣೆಯ ಪ್ರಕರಣ ಬೆಳಕಿಗೆ ಬರುತ್ತಿದ್ದು ಚಿನ್ನ ಕಳ್ಳಸಾಗಣೆಗೆ ಗುದ ದ್ವಾರವೇ ಹೆಚ್ಚು ಸುರಕ್ಷಿತ ಎನ್ನುವಂತಾಗಿದೆ. ದುಬೈನಿಂದ ನೂರಾರು ಮಂದಿ ಇಂಥ ಕಳ್ಳಸಾಗಣೆಯಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದ್ದು ಒಂದೆರಡು ಪ್ರಕರಣಗಳಷ್ಟೇ ಹೊರಬರುತ್ತಿವೆ. ಈ ರೀತಿಯ ಕಳ್ಳಸಾಗಣೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳ ಪಾತ್ರವೂ ಇಲ್ಲದಿಲ್ಲ. ಪದೇ ಪದೇ ಒಂದೇ ಪ್ರಕಾರದ ಪ್ರಕರಣ ಹೊರ ಬರುತ್ತಿರುವುದರಿಂದ ಇದೇ ಮಾದರಿಯ ಕಳ್ಳಸಾಗಣೆ ಇದರ ನೂರು ಪಟ್ಟು ಆಗುತ್ತಿರುವುದರ ಮುನ್ಸೂಚನೆ ಅನ್ನುವ ಮಾತೂ ಕೇಳಿಬರುತ್ತಿದೆ.
Based on intelligence Customs sleuths of Mangaluru International Airport, one passenger from Dubai was intercepted and gold worth Rs 44.2 lac was recovered and seized on Thursday, January 21.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm