ಬ್ರೇಕಿಂಗ್ ನ್ಯೂಸ್
21-01-21 07:48 pm Mangaluru Correspondent ಕ್ರೈಂ
ಮಂಗಳೂರು, ಜ.21: ಬಸ್ ಚಾಲಕನಿಗೆ ಪೆಟ್ರೋಲ್ ಎರಚಿ ಬೆಂಕಿ ಕೊಡಲು ಪ್ರಯತ್ನಿಸಿದ ಪ್ರಕರಣದಲ್ಲಿ ಆರೋಪಿ ಫೈಸಲ್ ನಗರದ ಮಹಮ್ಮದ್ ಅಶ್ರಫ್ (26)ನನ್ನು ಪೊಲೀಸರು ಬಂಧಿಸಿದ್ದಾರೆ.
ಜ.19ರಂದು ರಾತ್ರಿ 8.30ರ ಸುಮಾರಿಗೆ ಸ್ಟೇಟ್ ಬ್ಯಾಂಕ್ ಕಡೆಯಿಂದ 23 ನಂಬರಿನ ಸುವರ್ಣ ಹೆಸರಿನ ಖಾಸಗಿ ಬಸ್ ಪಡೀಲ್ ಫೈಸಲ್ ನಗರಕ್ಕೆ ತೆರಳುತ್ತಿದ್ದಾಗ, ಸೈಡ್ ಕೊಡದ ವಿಚಾರದಲ್ಲಿ ಬೈಕ್ ಸವಾರ ರೌಡಿಸಂ ತೋರಿಸಿದ್ದ. ಬಸ್ಸಿಗೆ ಬೈಕನ್ನು ಅಡ್ಡ ಇಟ್ಟು ಬೈದಿದ್ದಲ್ಲದೆ, ಬೈಕ್ ಸವಾರ ಅಶ್ರಫ್ ತನ್ನ ಕೈಲಿದ್ದ ಪೆಟ್ರೋಲ್ ಬಾಟಲಿಯಿಂದ ಚಾಲಕ ಸಂಪತ್ ಮತ್ತು ಬಸ್ಸಿನ ಮುಂಭಾಗಕ್ಕೆ ಎರಚಿದ್ದ. ಇದರಿಂದ ಅಪಾಯ ಅರಿತ ಚಾಲಕ ಕೂಡಲೇ ಅಲ್ಲಿಂದ ಪರಾರಿಯಾಗಿದ್ದ. ಆನಂತರ ಸ್ಥಳೀಯರು ಮತ್ತು ಬಸ್ ಸಿಬಂದಿ ಆರೋಪಿಯನ್ನು ತರಾಟೆಗೆತ್ತಿಕೊಂಡಿದ್ದರು. ಆರೋಪಿ ಅಶ್ರಫ್ ಅಲ್ಲಿಂದ ಪರಾರಿಯಾಗಿದ್ದ. ಈ ಬಗ್ಗೆ ಬಸ್ ಸಿಬಂದಿ ಕಂಕನಾಡಿ ಪೊಲೀಸರಿಗೆ ದೂರು ನೀಡಿದ್ದರು.
ಕಂಕನಾಡಿ ಫೈಸಲ್ ನಗರ ನಿವಾಸಿ ಅಶ್ರಫ್ ನನ್ನು ಬಂಧಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್ ಆರೋಪಿಯನ್ನು ಹಾಜರುಪಡಿಸಿ, ಘಟನೆಯ ವಿವರ ನೀಡಿದರು. ಅಲ್ಲದೆ ಬಸ್ಸಿಗೆ ಮತ್ತು ಚಾಲಕನಿಗೆ ಪೆಟ್ರೋಲ್ ಎರಚುವುದು ಗಂಭೀರ ಪ್ರಕರಣವಾಗಿದ್ದು, ಆರೋಪಿ ವಿರುದ್ಧ ರೌಡಿಶೀಟ್ ತೆರೆಯುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಸಿಟಿ ಬಸ್ ಚಾಲಕನ ಜೊತೆ ಜಟಾಪಟಿ ; ಬೈಕ್ ಸವಾರನಿಂದ ಪೆಟ್ರೋಲ್ ಸ್ಪ್ರೇ !!
ಪೆಟ್ರೋಲ್ ಸುರಿದು ಬಸ್ ಚಾಲಕನ ಹತ್ಯೆಗೆ ಯತ್ನ ; ತಕ್ಷಣ ಆರೋಪಿ ಬಂಧಿಸಲು ಒತ್ತಾಯ
The biker who poured petrol on bus driver Sampath in a case of road rage has been arrested in Mangalore. The arrested has been identified as Mohammed Ashraf (26), a resident of Bajal, who works as a welder.
07-09-25 10:17 am
Bangalore Correspondent
Mandya Suicide, Marriage: ಮದುವೆ ಕ್ಯಾನ್ಸಲ್ ಆಗಿ...
07-09-25 10:11 am
Sirsi Airgun, Murder, Crime: ಶಿರಸಿ; ಏರ್ಗನ್ ಗ...
06-09-25 08:28 pm
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
07-09-25 02:25 pm
Mangalore Correspondent
Ullal, Mangalore Police: ಮೊದಲ ಪತ್ನಿಗೆ ಜೀವನಾಂಶ...
06-09-25 10:59 pm
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
07-09-25 03:34 pm
Mangalore Correspondent
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm