ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am