ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm