ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm