ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm