ಬ್ರೇಕಿಂಗ್ ನ್ಯೂಸ್
24-01-21 08:26 pm Mangaluru Correspondent ಕ್ರೈಂ
ಮಂಗಳೂರು, ಜ.24: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ಪತ್ನಿ ಮೇಲೆ ಹಲ್ಲೆ ಮತ್ತು ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಪೊಲೀಸರಿಂದ ಬಂಧನ ಭೀತಿ ಶುರುವಾಗಿದೆ. ಈ ಬಗ್ಗೆ ಅವರ ಪತ್ನಿಯೇ ಬೆಂಗಳೂರಿನ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕೆಎಎಸ್ ಅಧಿಕಾರಿ ಜಿ.ಟಿ. ದಿನೇಶ್ ಕುಮಾರ್ ಹಾಗೂ ಅತ್ತಿಗೆ ರಮ್ಯಾ ಎಂಬವರ ವಿರುದ್ದ ಪತ್ನಿ ಕೆ.ಪಿ. ದೀಪ್ತಿ ದೂರು ದಾಖಲು ಮಾಡಿದ್ದಾರೆ. ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಚಿತ್ರದುರ್ಗದ ಸಂತೆಬೆನ್ನೂರಿನ ದೀಪ್ತಿ ಆರ್.ಆರ್.ನಗರದಲ್ಲಿ ವಾಸವಾಗಿದ್ದು, 2015ರಲ್ಲಿ ಹಿಂದು ಸಂಪ್ರದಾಯದಂತೆ ದಿನೇಶ್ ಕುಮಾರ್ ಜೊತೆಗೆ ಮದುವೆಯಾಗಿದ್ದರು. ದೀಪ್ತಿ ಪೋಷಕರು ವರದಕ್ಷಿಣೆ ರೂಪದಲ್ಲಿ ಒಂದು ಕೆಜಿ ಚಿನ್ನ, ಐದು ಕೆಜಿ ಬೆಳ್ಳಿ ನೀಡಿ ಅದ್ಧೂರಿಯಾಗಿ ಮೈಸೂರಿನಲ್ಲಿ ಮದುವೆ ಮಾಡಿದ್ದರು. ಮದುವೆಯ ಫಲವಾಗಿ ದಂಪತಿಗೆ ಹೆಣ್ಣು ಮಗು ಜನಿಸಿತ್ತು.
ಆರಂಭದಲ್ಲಿ ಇಬ್ಬರೂ ಅನೋನ್ಯವಾಗಿದ್ದರು. ನಂತರ ಇಬ್ಬರ ಮಧ್ಯೆ ಮನಸ್ತಾಪ ಆಗಿದ್ದು ದಿನೇಶ್ ಮಗು ಮತ್ತು ಪತ್ನಿಗೆ ಏನನ್ನೂ ಕೊಡದೆ ನಿರ್ಲಕ್ಷ್ಯ ವಹಿಸುತ್ತಿದ್ದರು. ಇದನ್ನು ಪ್ರಶ್ನಿಸಿದರೆ ಮನೆಯಿಂದ ಚಿನ್ನಾಭರಣ ತಂದುಕೊಡುವಂತೆ ಮಾನಸಿಕ ಹಾಗೂ ದೈಹಿಕವಾಗಿ ನಿಂದಿಸುತ್ತಿದ್ದ. ಇದಕ್ಕೆ ದಿನೇಶ್ ಕುಮಾರ್ನ ಅತ್ತಿಗೆ ರಮ್ಯಾ ಸಾಥ್ ನೀಡಿದ್ದಳು. ಕಿರುಕುಳದ ಬಗ್ಗೆ ಗೊತ್ತಾಗಿ ಪತ್ನಿ ಕಡೆಯವರು ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿಯನ್ನೂ ನಡೆಸಿದ್ದರು. ಸಂಧಾನದ ಬಳಿಕವೂ ಮತ್ತೆ ವರದಕ್ಷಿಣೆ ತರುವಂತೆ ಗಂಡ ಪೀಡಿಸುತ್ತಿದ್ದ ಎಂದು ಪತ್ನಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
A case of Dowry has been filed against Mangalore Urban Development Authority Commissioner Dinesh Kumar by his wife in Bangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm