ಬ್ರೇಕಿಂಗ್ ನ್ಯೂಸ್
25-01-21 11:14 am Mangalore Correspondent - Special Report ಕ್ರೈಂ
ಬೆಳ್ತಂಗಡಿ, ಜ.25 : ಉಜಿರೆಯ ಬಿಜೆಪಿ ಅಲ್ಪಸಂಖ್ಯಾತ ಘಟಕದ ಮುಖಂಡನ ಎಂಪೈರ್ ಹೊಟೇಲಿಗೆ ನುಗ್ಗಿ ಅಲ್ಲಿನ ಕೆಲಸಗಾರರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿ ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಉಜಿರೆ ನಿವಾಸಿಗಳಾದ ಅಜಿತ್ ಕುಮಾರ್, ಅರುಣ್ ಕುಮಾರ್, ನಿತೀಶ್, ಆಶಿಶ್ ಕುಮಾರ್, ಪರಮೇಶ್ವರ ಹಾಗೂ ನವೀನ್ ಬಂಧಿತ ಆರೋಪಿಗಳು.
ಶನಿವಾರ ರಾತ್ರಿ ಎಂಟು ಗಂಟೆಯ ಸುಮಾರಿಗೆ ಉಜಿರೆಯ ಎಂಪೈರ್ ಹೊಟೇಲಿನಲ್ಲಿ ಕೆಲಸ ಮಾಡುತ್ತಿರುವ ಮುಹಮ್ಮದ್ ಅಲ್ತಾಫ್ ಎಂಬವರು ಪಾರ್ಸೆಲ್ ನೀಡಿ ವಾಪಸ್ ಬರುತ್ತಿರುವುದನ್ನು ಕಾದು ಕುಳಿತಿದ್ದ ತಂಡವೊಂದು ಹಲ್ಲೆ ನಡೆಸಿದೆ. ಅವರು ಹಲ್ಲೆಕೋರರಿಂದ ತಪ್ಪಿಸಿಕೊಂಡು ಹೊಟೇಲ್ಗೆ ಬಂದಿದ್ದಾರೆ. ಈ ವೇಳೆ ತಂಡ ಅಲ್ತಾಫ್ರನ್ನು ಬೆನ್ನಟ್ಟಿಕೊಂಡು ಬಂದು ಹೊಟೇಲ್ಗೆ ನುಗ್ಗಿ ಅಲ್ತಾಫ್ ಹಾಗೂ ಸ್ಥಳದಲ್ಲಿದ್ದವರ ಮೇಲೆ ಹಲ್ಲೆ ನಡೆಸಿದ್ದಾರೆನ್ನಲಾಗಿದೆ.


ವಾರದ ಹಿಂದೆ ಹೊಟೇಲ್ಗೆ ಬಂದಿದ್ದ ಈ ತಂಡ ಹೋಟೆಲ್ ಕೆಲಸಗಾರರೊಂದಿಗೆ ಗಲಾಟೆ ಮಾಡಿದ್ದರು ಎನ್ನಲಾಗಿದ್ದು ಇದರ ಮುಂದುವರಿದ ಭಾಗವಾಗಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸುಮಾರು ಹದಿನೈದು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ಸಿಸಿಟಿವಿ ಕ್ಯಾಮರಾಗಳ ದಾಖಲೆಗಳನ್ನು ಸಂಗ್ರಹಿಸಲಾಗಿದ್ದು ಆರೋಪಿಗಳ ಬಂಧನಕ್ಕೆ ಮುಂದಾಗಿದ್ದಾರೆ.
Beltangady police on Sunday, January 24 arrested six persons for allegedly barging into a hotel owned by a local BJP leader and assaulting the staff.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am